ಮಳೆ ಎಂಬ ಮಾಯೆಯ ಲೆಕ್ಕ | ಮಳೆ ಬಂದಾಗ ಬಿಸಿಲಿನಾಸೆ, ಬಿಸಿಲು ಬಂದಾಗ ಚಳಿಯ ಆಸೆ…. ! | ಮಳೆಯ ಸುತ್ತ ಬರೆಯುತ್ತಾರೆ ಕೃಷಿಕ ಟಿ ಆರ್‌ ಸುರೇಶ್ಚಂದ್ರ |

July 7, 2022
2:25 PM
Advertisement
ಮಳೆ ಎಂಬ ಮಾಯೆಯ ಬಗ್ಗೆ ಕೃಷಿಕ ಟಿ ಆರ್‌ ಸುರೇಶ್ಚಂದ್ರ ಬರೆದಿದ್ದಾರೆ. ಮಳೆ ಎಂದರೆ ಪ್ರಕೃತಿಯ ಒಳನೋಟ. ಬಿದ್ದ ಮಳೆಯನ್ನು  ವಿಶ್ಲೇಷಣೆ ಮಾಡಿದ್ದಾರೆ ಸುರೇಶ್ಚಂದ್ರ ಅವರು ಕಳೆದ ವರ್ಷ ಇದುರೆಗೆ ಸುರಿದ ಒಟ್ಟು ವಾರ್ಷಿಕ ಮಳೆ 1190 ಮಿಮೀ. ಈ ವರ್ಷ ಸುರಿದ ಒಟ್ಟು ವಾರ್ಷಿಕ ಮಳೆ 1644 ಮಿಮೀ ಸುರಿದಿದೆ..!
ಮಳೆ ಮಳೆ ಮಳೆ…
ಏನೆಂದು ನಾ ಹೇಳಲೀ
ಮಾನವನಾಸೆಗೆ ಕೊನೆ ಎಲ್ಲೀ
ಕಾಣೋದೆಲ್ಲಾ ಬೇಕು ಎಂಬ ಹಟದಲ್ಲೀ
ಒಳ್ಳೆದೆಲ್ಲಾ ಬೇಕು ಎಂಬ ಛಲದಲ್ಲಿ
ಯಾರನ್ನೂ ಪ್ರ್ರೀತಿಸನೂ ಜಗದಲ್ಲಿ
ಏನೊಂದೂ ಬಾಳಿಸನೂ ಜಗದಲ್ಲೀ…

….ನಮ್ಮ ಅಸೆಗಳಿಗೆ ಮಿತಿ ಇದೆಯಾ… ನಿರೀಕ್ಷೆಗಳಿಗೆ ಮಿತಿ ಇದೆಯೋ… ಆಸೆಗಳ ಹಿಂದೆ ಓಡೋಡುತ್ತಾ ಪ್ರಕೃತಿಯನ್ನೂ ನಮ್ಮ ತಾಳಕ್ಕೆ ತಕ್ಕಂತೆ ಕುಣಿಸೋ ಪ್ರಯತ್ನ ಮಾಡ್ತೇವಲ್ಲಾ….. ತನ್ನ ಕಾರ್ಯ ಆದರೆ ಸಾಕು,ತನ್ನ ಕಾರ್ಯಕ್ಕೆ ಪ್ರಕೃತಿ ಒಲಿಯಬೇಕೂ ಎಂಬ ನಿರೀಕ್ಷೆ ಸದಾ ಹುಚ್ಚು ಕುದುರೆಯಂತೆ ಕಾಡುತ್ತಲ್ಲಾ……. ಹೌದು…,

Advertisement
Advertisement
Advertisement
ಮಳೆ ಬಂದಾಗ ಬಿಸಿಲಿನಾಸೆ…
ಬಿಸಿಲು ಬಂದಾಗ ಛಳಿಯ ಆಸೆ..
ಚಳಿ ಬಂದಾಗ ಮಳೆಯ ಆಸೆ…… ಎಲ್ಲೆಲ್ಲಿಯೋ ನೆರೆ ಬಂದು‌ ಮುಳುಗಡೆಯಾದ ವಿಡಿಯೋ ಥ್ರಿಲ್ ಕೊಡುತ್ತದೆ, ಎಲ್ಲೋ ಅಣೆಕಟ್ಟು ತುಂಬಿ ಊರು ಕೇರಿಗಳು ಮುಳುಗಿ ಬಂದ ವಿದ್ಯುತ್ ಮುದ ನೀಡುತ್ತದೆ, ಯಾವುದೋ ಗುಡ್ಡ ಕುಸಿಯುವ ಚಿತ್ರ, ಯಾವುದೊ ಮನೆಗೆ ನುಗ್ಗುವ ನೀರು ಕುತೂಹಲ ಮೂಡಿಸುತ್ತದೆ.

Advertisement
ಆದರೆ…, ನಮ್ಮ ತೋಟಕ್ಕೆ ಪ್ರವಾಹ ಬಂದರೆ ಸಂಪೂರ್ಣ ಅಲ್ಲೋಲ ಕಲ್ಲೋಲ, ನಮ್ಮ ತೋಟದ ಅಡಿಕೆ/ತೆಂಗು ಯಾ ಇನ್ನಿತರ ಬೆಳೆಗಳ ಬುಡದಲ್ಲಿ ನೀರು ನಿಂತರೆ ಯಾತನೆಯ ಪರಮಾವಧಿ, ನಮ್ಮ ಗುಡ್ಡ ಕುಸಿದರೆ ನಿಂತ ನೆಲೆಯೇ ಕುಸಿದಂತೆ… ಊಹೂಂ..,
ಪ್ರಕೃತಿ ಮಾತೆ ಒಂದು ಇಂಚೂ ಬದಲಾಗಳು… ತನ್ನ ನಿರ್ಧಾರದಿಂದ ಹಿಂದೆ ಸರಿಯಳು…. ನಮಗಾಗಿ ಪ್ರಕೃತಿಯನ್ನು ಬದಲಿಸಲು ಹೊರಟು ಗೆದ್ದ ಪ್ರಸಂಗ ಕಂಡದ್ದಿದೆಯಾ…ಇಲ್ಲ….ಬದಲಿಸ ಹೊರಟರೆ ಅದರ ನಾಲ್ಕು ಪಾಲು ವೇಗದಲ್ಲಿ ಮುನ್ನುಗ್ಗಿ ಬಂದಾಳು….

ಮುನ್ನುಗ್ಗಿ ಬಂದಾಗ ಒಪ್ಪಲೇ ಬೇಕಷ್ಟೆ..  ಹಾಗೆಯೇ ಈ ವರ್ಷದ ಮಳೆ ಕೂಡಾ… ಜೂನ್ ತಿಂಗಳಲ್ಲಿ ಅಷ್ಟಕ್ಕಷ್ಟೇ ಇದ್ದ ಮಳೆ ಜುಲೈ ತಿಂಗಳ ಪ್ರಾರಂಭಕ್ಕೇ ವೇಗ ವರ್ಧಿಸುತ್ತಾ ದಾಖಲೆಗಳತ್ತ ಒಡುತ್ತಾ ಮನುಜನನ್ನು ಗಣನೆಗೇ ತೆಗೆದುಕೊಳ್ಳಲಿಲ್ಲ.

Advertisement
ಕಳೆದ ವರ್ಷ ಜುಲೈ ಮೊದಲ ಹತ್ತು ದಿನ ಮಳೆ ಇರಲೇ ಇಲ್ಲ….ಆದರೆ, ಈ ವರ್ಷ ಜುಲೈ ಪ್ರಾರಂಭದಿಂದಲೇ ಶತಕ ದಾಖಲೆಯ ಪ್ರವಾಹ…, ಹಾಗೆಯೇ..,  ಈ ವರ್ಷ ಆರ್ಧ್ರಾ ನಕ್ಷತ್ರದ ಎಲ್ಲಾ ದಿನಗಳೂ ಓತಪ್ರೋತವಾಗಿ ಮಳೆ ಸುರಿದು 865 ಮಿಮೀ ತಲುಪಿತು. ಅದೇ ಕಳೆದ ವರ್ಷದ ಆರ್ಧ್ರಾ ನಕ್ಷತ್ರದಲ್ಲಿ ಕೇವಲ ಆರು ದಿನಗಳಲ್ಲಿ ಮಳೆ ಸುರಿದು 173 ಮಿಮೀ ತಲುಪಿತ್ತಷ್ಟೆ…ಅದೇ 2020 ರ ಆರ್ಧ್ರಾ ನಕ್ಷತ್ರದ ಹನ್ನೊಂದು ದಿನಗಳಲ್ಲಿ ಮಳೆ ಸುರಿದು 453 ಮಿಮೀ ತಲುಪಿತ್ತು.

ಹಾ..,  ಆರ್ಧ್ರಾ ನಕ್ಷತ್ರದ ದಿನಗಳು ಕಳೆದು ಮಹಾಮಳೆ ನಕ್ಷತ್ರ ಪುನರ್ವಸುವಿನ ದಿನಗಳಲ್ಲಿದ್ದೇವೆ… ಕಳೆದ ವರ್ಷದ ಪುನರ್ವಸು ಹತ್ತು ದಿನಗಳಲ್ಲಿ ಮಳೆ ಸುರಿಸಿ 644ಮಿಮೀ ತಲುಪಿತ್ತು, ಹಾಗೂ 2020 ರಲ್ಲಿ ಹದಿಮೂರು ದಿನಗಳಲ್ಲಿ ಸುರಿದು 564 ಮಿಮೀ ತಲುಪಿತ್ತು.

Advertisement

2020 ರಲ್ಲಿ ಜುಲೈ ಆರನೇ ತಾರೀಕಿನ ತನಕ 57 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1190 ಮಿಮೀ.
2021 ರಲ್ಲಿ ಜುಲೈ ಆರನೇ ತಾರೀಕಿನ ತನಕ 67 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1644 ಮಿಮೀ.

2022 ರಲ್ಲಿ ಜುಲೈ ಆರನೇ ತಾರೀಕಿನ ತನಕ 66 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 2293 ಮಿಮೀ.
ಅಂದರೆ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 650 ಮಿಮೀ ಮಳೆ ಹೆಚ್ಚು ಸುರಿದಿದೆ….
ಪ್ರಕೃತಿಯ ನಡೆ ನಿಗೂಢ ……ದಾಖಲಿಸಬಹುದಷ್ಟೇ ಹೊರತು ,ಊಹಿಸಲು ಅಸಾಧ್ಯ…. ಅದಕ್ಕಾಗಿಯೇ ಸನಾತನೀಯರು ಈ ಪ್ರಕೃತಿಯ ನಿಗೂಢತೆಗೆ ಹತ್ತು ಹಲವು ದೇವರೆಂಬ ಹೆಸರು ಕೊಟ್ಟು ಕೊಟ್ಟು..

Advertisement

” ತ್ವಂ ಬ್ರಹ್ಮಾ ತ್ವಂ ವಿಷ್ಣುಸ್ತ್ವಂ ರುದ್ರಸ್ತ್ವಮಿಂದ್ರಸ್ತ್ವಮಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮ ಭೂರ್ಬವಃ ಸುವರೋಮ್ ” ಎಂದು ಶರಣಾಗತಿಯ ಪಾಠ ಮಾಡಿದರಲ್ಲವೇ….
ಅನುಸರಿಸೋಣ ಹಿರಿಯರ ನಡೆಯ, ಪ್ರಕೃತಿಯ ಮಹತ್ತನ್ನು ನಮಿಸೋಣ .

ಬರಹ :
ಟಿ.ಆರ್‌ ಸುರೇಶ್ಚಂದ್ರ ತೊಟ್ಟೆತ್ತೋಡಿ, ಕಲ್ಮಡ್ಕ
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಎಲ್ಲರೂ ಒಂದಾಗಿ ಬಾಳುವ, ಮೇಳು-ಕೀಳು ಮದ -ಮತ್ಸರ ಬಿಟ್ಟು ಬದುಕುವ : ಎಲ್ಲಾರೂ ಮಾಡುವದು ಹೊಟ್ಟೆಗಾಗಿ… ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ :
April 20, 2024
4:21 PM
by: The Rural Mirror ಸುದ್ದಿಜಾಲ
ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |
April 18, 2024
10:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror