….ನಮ್ಮ ಅಸೆಗಳಿಗೆ ಮಿತಿ ಇದೆಯಾ… ನಿರೀಕ್ಷೆಗಳಿಗೆ ಮಿತಿ ಇದೆಯೋ… ಆಸೆಗಳ ಹಿಂದೆ ಓಡೋಡುತ್ತಾ ಪ್ರಕೃತಿಯನ್ನೂ ನಮ್ಮ ತಾಳಕ್ಕೆ ತಕ್ಕಂತೆ ಕುಣಿಸೋ ಪ್ರಯತ್ನ ಮಾಡ್ತೇವಲ್ಲಾ….. ತನ್ನ ಕಾರ್ಯ ಆದರೆ ಸಾಕು,ತನ್ನ ಕಾರ್ಯಕ್ಕೆ ಪ್ರಕೃತಿ ಒಲಿಯಬೇಕೂ ಎಂಬ ನಿರೀಕ್ಷೆ ಸದಾ ಹುಚ್ಚು ಕುದುರೆಯಂತೆ ಕಾಡುತ್ತಲ್ಲಾ……. ಹೌದು…,
ಮಳೆ ಬಂದಾಗ ಬಿಸಿಲಿನಾಸೆ…2020 ರಲ್ಲಿ ಜುಲೈ ಆರನೇ ತಾರೀಕಿನ ತನಕ 57 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1190 ಮಿಮೀ.
2021 ರಲ್ಲಿ ಜುಲೈ ಆರನೇ ತಾರೀಕಿನ ತನಕ 67 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 1644 ಮಿಮೀ.
2022 ರಲ್ಲಿ ಜುಲೈ ಆರನೇ ತಾರೀಕಿನ ತನಕ 66 ದಿನಗಳಲ್ಲಿ ಸುರಿದ ಒಟ್ಟು ವಾರ್ಷಿಕ ಮಳೆ 2293 ಮಿಮೀ.
ಅಂದರೆ ಕಳೆದ ವರ್ಷಕ್ಕಿಂತ ಈ ವರ್ಷ ಸುಮಾರು 650 ಮಿಮೀ ಮಳೆ ಹೆಚ್ಚು ಸುರಿದಿದೆ….
ಪ್ರಕೃತಿಯ ನಡೆ ನಿಗೂಢ ……ದಾಖಲಿಸಬಹುದಷ್ಟೇ ಹೊರತು ,ಊಹಿಸಲು ಅಸಾಧ್ಯ…. ಅದಕ್ಕಾಗಿಯೇ ಸನಾತನೀಯರು ಈ ಪ್ರಕೃತಿಯ ನಿಗೂಢತೆಗೆ ಹತ್ತು ಹಲವು ದೇವರೆಂಬ ಹೆಸರು ಕೊಟ್ಟು ಕೊಟ್ಟು..
” ತ್ವಂ ಬ್ರಹ್ಮಾ ತ್ವಂ ವಿಷ್ಣುಸ್ತ್ವಂ ರುದ್ರಸ್ತ್ವಮಿಂದ್ರಸ್ತ್ವಮಗ್ನಿಸ್ತ್ವಂ ವಾಯುಸ್ತ್ವಂ ಸೂರ್ಯಸ್ತ್ವಂ ಚಂದ್ರಮಾಸ್ತ್ವಂ ಬ್ರಹ್ಮ ಭೂರ್ಬವಃ ಸುವರೋಮ್ ” ಎಂದು ಶರಣಾಗತಿಯ ಪಾಠ ಮಾಡಿದರಲ್ಲವೇ….
ಅನುಸರಿಸೋಣ ಹಿರಿಯರ ನಡೆಯ, ಪ್ರಕೃತಿಯ ಮಹತ್ತನ್ನು ನಮಿಸೋಣ .
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…