Advertisement
ಸುದ್ದಿಗಳು

ಪೇರಡ್ಕದಲ್ಲಿ ದಿಢೀರ್ ಪ್ರವಾಹ | ದರ್ಗಾ, ತೋಟಕ್ಕೆ ನುಗ್ಗಿದ ನೀರು | ಮುಕ್ತಿಗಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ |

Share

ಕೊಯನಾಡು ದಬ್ಬಡ್ಕದಲ್ಲಿ ಉಂಟಾದ ಜಲಸ್ಫೋಟದಿಂದ ಸಂಪಾಜೆ ಗ್ರಾಮದ ಪೇರಡ್ಕದಲ್ಲಿ ದಿಡೀರ್ ಪ್ರವಾಹದಿಂದ ದರ್ಗಾ ಶರೀಫ್ ,ಟಿ.ಎಂ ಶಾಹಿದ್ ತೆಕ್ಕಿಲ್ ಅವರ ತೋಟ, ಸಫಿಯರ ಮನೆ ಮತ್ತು ತೋಟ, ಸತ್ಯಜಿತ್ ಹಾಗು ಲಕ್ಷ್ಮೀಶ ಅವರ ತೋಟ, ಕೆ.ಎಂ.ಮೂಸಾ ಅವರ ತೋಟಗಳು ಜಲಾವೃತಗೊಂಡಿತು. ಈ ಪ್ರದೇಶಕ್ಕೆ ಕೆಪಿಸಿಸಿ ಕಾರ್ಯದರ್ಶಿ ಟಿ.ಎಂ ಶಾಹಿದ್ ತೆಕ್ಕಿಲ್ ಭೇಟಿ ನೀಡಿ ಸ್ಥಳ ಪರಿಶೀಲಿದರು.

ಈ ಪ್ರದೇಶದಲ್ಲಿ ನಿರಂತರ ಸಂಭವಿಸುವ ನೆರೆಯಿಂದ ಮುಕ್ತಿಯಾಗಲು ಪೇರಡ್ಕ ದರ್ಗಾ ಶರೀಫ್ ನಲ್ಲಿ ಸ್ಥಳೀಯ ಖತೀಬರಾದ ಬಹು ರಿಯಾಜ್ ಫೈಝಿ ಎಮ್ಮೆಮಾಡುರವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಟಿ.ಎಂ ಶಾಹಿದ್ ತೆಕ್ಕಿಲ್ ರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಅಬುಸಾಲಿ ಗೂನಡ್ಕ , ಸಹಾಯಕ ಅಧ್ಯಾಪಕ ನೂರುದ್ದೀನ್ ಮುಸ್ಲಿಯಾರ್ , ಮಸೀದಿಯ ಕಾರ್ಯದರ್ಶಿ ಟಿ.ಎಂ ಅಬ್ದುಲ್ ರಝಾಕ್ ಹಾಜ ತೆಕ್ಕಿಲ್, ತೆಕ್ಕಿಲ್ ಮೊಹಮ್ಮದ್ ಕುಂಞ ಪೇರಡ್ಕ, ಟಿ.ಬಿ. ಅಬ್ದುಲ್ಲಾ ತೆಕ್ಕಿಲ್, ರಹೀಮ್ ಬೀಜದಕಟ್ಟೆ, ಅಶ್ರಫ್ ತೆಕ್ಕಿಲ್ ಪೇರಡ್ಕ, ಜುರೈದ್ ತೆಕ್ಕಿಲ್ ಪೇರಡ್ಕ, ಸಾಧುಮಾನ್ ತೆಕ್ಕಿಲ್ ಪೇರಡ್ಕ, ಕೆ.ಎಂ ಮೂಸಾನ್ ಪೇರಡ್ಕ, ಕೆ.ಎಂ ಇಸ್ಮಾಯಿಲ್ , ಉಸ್ಮಾನ್ ಅರಂತೋಡು,ಹಾಫಿಳ್ ಪೇರಡ್ಕ,ತಾಜುದ್ದೀನ್ ತೆಕ್ಕಿಲ್, ಮಿಸ್ಬಾ ಅರಂತೋಡು , ಆರಿಫ್ ತೆಕ್ಕಿಲ್ ದರ್ಖಾಸ್ , ಸೊಹೈಲ್, ಇರ್ಫಾನ್ ಪೇರಡ್ಕ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago