Advertisement
ಅನುಕ್ರಮ

ಮಳೆ………. | ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ….!

Share

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ…….

Advertisement

ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ…..

ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು ನೀರಾವರಿ ತಜ್ಞರು ಈ ಅಧಿಕ ಮಳೆಯ ಗರಿಷ್ಠ ಉಪಯೋಗ ಪಡೆಯಲು ಮತ್ತು ಕೆಲವು ಶಾಶ್ವತ ಭವಿಷ್ಯದ ಯೋಜನೆಗಳನ್ನು ರೂಪಿಸಲು ಪ್ರಯತ್ನಿಸಬೇಕು…..

ವಾತಾವರಣ ಹೀಗೇ ಇರುತ್ತದೆ ಎಂದು ಹೇಳಲಾಗುವುದಿಲ್ಲ. ಕೆಲವು ವರ್ಷಗಳ ನಂತರ ಬರಗಾಲ ಬರಬಹುದು. ಅದರ ಪರಿಣಾಮ ಕಡಿಮೆ ಮಾಡಲು ನೀರಿನ ಸಂಗ್ರಹ ಮತ್ತು ಹಂಚಿಕೆಯ ಬಗ್ಗೆ ಏನಾದರೂ ಕಾರ್ಯ ಯೋಜನೆಯನ್ನು ಜಾರಿಗೊಳಿಸಬೇಕು…..

ಅತೀವೃಷ್ಟಿ ಮತ್ತು ಅನಾವೃಷ್ಟಿಯ ಅನುಭವದ ಆಧಾರದ ಮೇಲೆ ಇದನ್ನು ಪ್ರಾಯೋಗಿಕವಾಗಿ ಪ್ರಯತ್ನಿಸಿದರೆ ಸಾಧ್ಯವಾಗಬಹುದು. ಮುಖ್ಯವಾಗಿ ಶಾಶ್ವತ ಬರಗಾಲ ಪೀಡಿತ ಪ್ರದೇಶಗಳು ಎಂದು ಕರೆಯಲಾಗುತ್ತಿದ್ದ ಜಿಲ್ಲೆ, ತಾಲ್ಲೂಕುಗಳಲ್ಲಿ ಮುಂದೆ ಮಳೆ ಕಡಿಮೆಯಾದಾಗ ಈಗಿನ ಅಧಿಕ ನೀರು ಅಥವಾ ಅಂತರ್ಜಲ ಮಟ್ಟವನ್ನು ಹೇಗೆ ಒಂದಷ್ಟು ಕಾಲ ಉಪಯೋಗಿಸಿ ಕೊಳ್ಳಬಹುದು ಎಂಬುದರ ಅಂದಾಜು ಭೂಗರ್ಭ ಶಾಸ್ತ್ರಜ್ಞರು ಮಾಡಬಹುದು. ಅದೇರೀತಿ ಈ ಮಳೆಯ ಕಾರಣದಿಂದ ಸೃಷ್ಟಿಯಾದ ಗಿಡಮರಗಳನ್ನು ಒಂದು ದಟ್ಟ ಅರಣ್ಯ ಪ್ರದೇಶವಾಗಿ ಬೆಳೆಸುವ ಸಾಧ್ಯತೆಗಳನ್ನು ಪರಿಶೀಲಿಸಬಹುದು…..

ಸಾಮಾನ್ಯ ಜನರಾದ ನಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಅಥವಾ ತಿಳಿವಳಿಕೆ ಇರುವುದಿಲ್ಲ. ಆದರೆ ಈ‌ ಕ್ಷೇತ್ರಗಳ ತಜ್ಞರು ಈ ಬಗ್ಗೆ ‌ಜಾಗೃತರಾಗಿ ಸರ್ಕಾರದ ಗಮನಸೆಳೆದು ನಿರಂತರ ಕೆಲಸ ಮಾಡಬೇಕು. ಸಾಮಾನ್ಯ ಜನ ಅವರ ಮೇಲೆಯೇ ಭರವಸೆ ಇಟ್ಟಿರುತ್ತಾರೆ ಮತ್ತು ಅವಲಂಬಿಸಿರುತ್ತಾರೆ. ಇದು ಸರ್ಕಾರ ಮತ್ತು ತಜ್ಞರು ಕರ್ತವ್ಯ ಮತ್ತು ಜವಾಬ್ದಾರಿ……

ಆದರೆ ದುರಾದೃಷ್ಟವಶಾತ್ ‌ರಾಜಕೀಯ ಪಕ್ಷಗಳಿಗೆ, ಮಾಧ್ಯಮದವರಿಗೆ ಈ‌‌ ರೀತಿಯ ಶಾಶ್ವತ ‌ಅಭಿವೃದ್ಧಿಗಿಂತ ಚುನಾವಣೆಯೇ ಬಹುದೊಡ್ಡ ಸುದ್ದಿ ‌ಎಂಬಂತೆ ಪ್ರಚಾರ ಮಾಡುತ್ತಾರೆ. ತಮ್ಮ ಎಲ್ಲಾ ‌ಸಮಯ‌ ತಂತ್ರಗಾರಿಕೆ ಹಣ ಎಲ್ಲವೂ ಅದರಲ್ಲಿಯೇ ಕಳೆಯುತ್ತಾರೆ……

ಅತೀವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಒತ್ತಡ ಬೀಳುತ್ತದೆ. ಕೆಲವೊಮ್ಮೆ ಸಾಲ ಮಾಡಿ ಹಣ ನೀಡಬೇಕಾಗುತ್ತದೆ. ಆದ್ದರಿಂದ ಇಂತಹ ಸಮೃದ್ಧ ನೀರಿನ ಸಂಪನ್ಮೂಲಗಳು ಪ್ರಾಕೃತಿಕವಾಗಿ ಸಿಗುತ್ತಿರುವಾಗ ಇದರ ಪರಿಣಾಮಕಾರಿ ಉಪಯೋಗ ಪಡೆಯುವುದು ಆಡಳಿತದ ಜವಾಬ್ದಾರಿ…..

ಆದರೆ ಏನು ಮಾಡುವುದು ಸರ್ಕಾರ ಎಂಬುದು ರಾಜಕೀಯ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಇರುವಷ್ಟು ದಿನ ಮಾತ್ರ ತಮಗೆ ಎಷ್ಟು ಅನುಕೂಲವೋ ಅಷ್ಟು ಮಾಡಿಕೊಂಡು ಹೋಗುವಾಗ ಮನೆಯನ್ನು ಕೆಡಿಸಿಯೇ ಹೋಗುತ್ತಾರೆ. ಮುಂದೆ ಮತ್ತೊಬ್ಬರು….

ರಾಜ್ಯ ನಮ್ಮ ಸ್ವಂತ ಆಸ್ತಿ. ಅದನ್ನು ಮುಂದಿನ ತಲೆಮಾರಿಗೂ ಕೂಡ ಇನ್ನೂ ಉತ್ತಮವಾಗಿ ಬಿಟ್ಟು ಹೋಗಬೇಕು ಎಂಬ ಕಾಳಜಿ ಕಾಣುತ್ತಿಲ್ಲ. ಪ್ರತಿ ಮಳೆಗಾಲ ಅಥವಾ ಬರಗಾಲ ಇವರಿಗೆ ಹಣ ಮಾಡುವ ದಂಧೆಯಾಗಿದೆ…..

ಪ್ರಾಕೃತಿಕ ಸಂಪನ್ಮೂಲಗಳನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಪ್ರಕೃತಿಯ ವಿಕೋಪಗಳ ದುಷ್ಪರಿಣಾಮಗಳನ್ನು ಖಂಡಿತ ಕಡಿಮೆ ಮಾಡಿಕೊಳ್ಳಬಹುದು. ಇಲ್ಲದಿದ್ದರೆ ಪ್ರಕೃತಿಯ ಸಹಜ ವೈಪರೀತ್ಯಗಳನ್ನೇ ಸಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಆಗುವುದು ಖಚಿತ…..

ಆದ್ದರಿಂದ ದಯವಿಟ್ಟು ಸರ್ಕಾರ ಯಾರದೇ ಇರಲಿ, ದೀರ್ಘಕಾಲದ ಶಾಶ್ವತ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಮುಂದೆ ಹಣ ಸಮಯ ಉಳಿತಾಯ ಮಾಡಲು ಪ್ರಯತ್ನಿಸಿ. ಅಧಿಕಾರ ಎಂಬುದು ನಿಮ್ಮ ಸ್ವಂತ ಆಸ್ತಿಯಲ್ಲ. ಅದು ಒಂದು ಸಾರ್ವಜನಿಕ ಸೇವಾ ವೇದಿಕೆ.ಅದೇ ಮಾನವೀಯ ಧರ್ಮ……..

ಬರಹ :
ವಿವೇಕಾನಂದ. ಎಚ್.ಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

9 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

9 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago