Advertisement
ಕಿಟಕಿ

ಅರ್ಥವಾಗದ ಮಳೆಯ ನಾಡಿಬಡಿತ…….! | ಅಡುಗೆ ಮನೆಯ ಕಿಟಿಕಿಯಾಚೆಗಿನ ನೋಟ..

Share

ಮಳೆಗಾಲದ ದಿನಗಳೆಂದರೆ ನಮ್ಮ ಕರಾವಳಿ , ಮಲೆನಾಡು, ಹಳ್ಳಿ ಪ್ರದೇಶಗಳಲ್ಲಿ ಒಂದು ರೀತಿಯ ವನವಾಸವೇ. ಹಾಗಂತ ಕಾಡಲ್ಲೇ ಇರುತ್ತೀರಾ ಅಂತ ಕೇಳ ಬೇಡಿ.ಅಂದರೆ, ಸಿಕ್ಕಾಪಟ್ಟೆ ಸುರಿಯುವ ಮಳೆಗೆ ಮನೆಯಿಂದ ಹೊರಬರಲಾಗದ ಸ್ಥಿತಿ.  ಅಷ್ಟೇ…!. ಮಳೆಗಾಲ ಒಬ್ಬೊಬ್ಬರದು ಒಂದೊಂದು ಮಾತಾದರೆ, ಅಡುಗೆ ಮನೆಯ ಒಳಗಿನಿಂದ ವಿಷಯವೇ ಬೇರೆ..!, ಇಲ್ಲೀಗ ಇಲ್ಲಗಳ ವಿಷಯ..!.

ಬೇಸಿಗೆಯಲ್ಲಿ ಮನೆಯ ಹಿತ್ತಿಲಿನಲ್ಲಿ ನಮೂನೆವಾರು ತರಕಾರಿಗಳನ್ನು ಬೆಳೆಸಿ , ನಿತ್ಯ ತಟ್ಟೆ ತುಂಬಾ ಅನ್ನಕ್ಕಿಂತ ಜಾಸ್ತಿ ತರಕಾರಿ ಹೋಳುಗಳನ್ನೇ ಊಟ ಮಾಡುವವರಿಗೆ ದಿಡೀರ್ ಕೈ ಬಾಯಿ ಕಟ್ಟಿದಂತಾಗುತ್ತದೆ. ಸೌತೆಕಾಯಿ , ಕುಂಬಳಕಾಯಿ, ಚೀನಿಕಾಯಿಗಳು ಸ್ವಲ್ಪ ದಿನ ಉಳಿವಂತಹ ತರಕಾರಿಗಳು. ಮನೆಯಲ್ಲಿ ಇವುಗಳಿದ್ದರೆ ಏನೋ ಧೈರ್ಯ. ಈ ಮಳೆಗೆ ಯಾವುದೇ ತರಕಾರಿಗಳೂ ಬೆಳೆಯದು. ಹರಿವೆ , ಬಸಳೆಯಂತೂ ಕೊಳೆತೇ ಹೋಗುವುದು. ಜೋರುಮಳೆಗೆ ಮೊದಲೇ ಗಿಡ ದೊಡ್ಡದಾಗಲಿ ಎಂದು ಸಾಲು ತಯಾರಿಸಿ ಬೀಜ ಹಾಕಿ ಗಿಡ ಮಾಡಿದರೆ ಈ ಜಡಿ ಮಳೆಗೆ ಹುಟ್ಟಿದ ಗಿಡವೂ ಕೊಳೆತೇ ಹೋಯಿತು. ಎಂದಿಗಿಂತ ಮೊದಲೇ ಸುರಿದ ಮಳೆ ಈ ಬಾರಿ ಮಳೆಗಾಲದ ತಯಾರಿಗೂ ಅವಕಾಶ ಕೊಡಲಿಲ್ಲ. ಸಾವಿರಗಟ್ಟಲೆ ಅಲ್ಲವಾದರೂ ನೂರರ ಸಂಖ್ಯೆಯ ಹಪ್ಪಳವೂ ಮಾಡಲಾಗಲಿಲ್ಲ. ಚೆನ್ನಾಗಿ ಬಲಿತ ಬಾಳೆಗೊನೆಗಳು ನೇತು ಕೊಂಡಿದ್ದರೂ ತೆಳ್ಳಗೆ ತುಂಡು ಮಾಡಿ ಬಿಸಿಲಿನಲ್ಲಿ ಒ‍ಣಗಿಸಿ ಡಬ್ಬಿಯಲ್ಲಿ ಹಾಕಿ ಇಡಲಿಲ್ಲ. ಎಲ್ಲಾ ನಮೂನೆಯ ಕಾಡು ಮಾವಿನ ಹಣ್ಣುಗಳಿದ್ದರೂ ಮಾಂಬಳದ ಚಾಪೆ ಹೊರ ತೆಗೆಯಲಾಗಲೇ ಇಲ್ಲ. ಪ್ರತಿ ವರುಷದಂತೆ ಈ ವರ್ಷ ಇಲ್ಲ. ಪ್ರಕೃತಿಯ ಮನಸಲ್ಲೇನು ಓಡುತ್ತಿದೆ ನಮಗರ್ಥವಾಗುತ್ತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೃದಯದ ಬಡಿತ ಲೆಕ್ಕಕ್ಕೇ ಸಿಗುತ್ತಿಲ್ಲ. ಯಾಕೋ ಗೊತ್ತಿಲ್ಲ , ಬದಲಾಗುತ್ತಿರುವುದು ನಾವು …..ನಮ್ಮ ಬದುಕೋ ? ಪ್ರಕೃತಿಯೋ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

8 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

11 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

22 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago