Advertisement
ಕಿಟಕಿ

ಅರ್ಥವಾಗದ ಮಳೆಯ ನಾಡಿಬಡಿತ…….! | ಅಡುಗೆ ಮನೆಯ ಕಿಟಿಕಿಯಾಚೆಗಿನ ನೋಟ..

Share

ಮಳೆಗಾಲದ ದಿನಗಳೆಂದರೆ ನಮ್ಮ ಕರಾವಳಿ , ಮಲೆನಾಡು, ಹಳ್ಳಿ ಪ್ರದೇಶಗಳಲ್ಲಿ ಒಂದು ರೀತಿಯ ವನವಾಸವೇ. ಹಾಗಂತ ಕಾಡಲ್ಲೇ ಇರುತ್ತೀರಾ ಅಂತ ಕೇಳ ಬೇಡಿ.ಅಂದರೆ, ಸಿಕ್ಕಾಪಟ್ಟೆ ಸುರಿಯುವ ಮಳೆಗೆ ಮನೆಯಿಂದ ಹೊರಬರಲಾಗದ ಸ್ಥಿತಿ.  ಅಷ್ಟೇ…!. ಮಳೆಗಾಲ ಒಬ್ಬೊಬ್ಬರದು ಒಂದೊಂದು ಮಾತಾದರೆ, ಅಡುಗೆ ಮನೆಯ ಒಳಗಿನಿಂದ ವಿಷಯವೇ ಬೇರೆ..!, ಇಲ್ಲೀಗ ಇಲ್ಲಗಳ ವಿಷಯ..!.

ಬೇಸಿಗೆಯಲ್ಲಿ ಮನೆಯ ಹಿತ್ತಿಲಿನಲ್ಲಿ ನಮೂನೆವಾರು ತರಕಾರಿಗಳನ್ನು ಬೆಳೆಸಿ , ನಿತ್ಯ ತಟ್ಟೆ ತುಂಬಾ ಅನ್ನಕ್ಕಿಂತ ಜಾಸ್ತಿ ತರಕಾರಿ ಹೋಳುಗಳನ್ನೇ ಊಟ ಮಾಡುವವರಿಗೆ ದಿಡೀರ್ ಕೈ ಬಾಯಿ ಕಟ್ಟಿದಂತಾಗುತ್ತದೆ. ಸೌತೆಕಾಯಿ , ಕುಂಬಳಕಾಯಿ, ಚೀನಿಕಾಯಿಗಳು ಸ್ವಲ್ಪ ದಿನ ಉಳಿವಂತಹ ತರಕಾರಿಗಳು. ಮನೆಯಲ್ಲಿ ಇವುಗಳಿದ್ದರೆ ಏನೋ ಧೈರ್ಯ. ಈ ಮಳೆಗೆ ಯಾವುದೇ ತರಕಾರಿಗಳೂ ಬೆಳೆಯದು. ಹರಿವೆ , ಬಸಳೆಯಂತೂ ಕೊಳೆತೇ ಹೋಗುವುದು. ಜೋರುಮಳೆಗೆ ಮೊದಲೇ ಗಿಡ ದೊಡ್ಡದಾಗಲಿ ಎಂದು ಸಾಲು ತಯಾರಿಸಿ ಬೀಜ ಹಾಕಿ ಗಿಡ ಮಾಡಿದರೆ ಈ ಜಡಿ ಮಳೆಗೆ ಹುಟ್ಟಿದ ಗಿಡವೂ ಕೊಳೆತೇ ಹೋಯಿತು. ಎಂದಿಗಿಂತ ಮೊದಲೇ ಸುರಿದ ಮಳೆ ಈ ಬಾರಿ ಮಳೆಗಾಲದ ತಯಾರಿಗೂ ಅವಕಾಶ ಕೊಡಲಿಲ್ಲ. ಸಾವಿರಗಟ್ಟಲೆ ಅಲ್ಲವಾದರೂ ನೂರರ ಸಂಖ್ಯೆಯ ಹಪ್ಪಳವೂ ಮಾಡಲಾಗಲಿಲ್ಲ. ಚೆನ್ನಾಗಿ ಬಲಿತ ಬಾಳೆಗೊನೆಗಳು ನೇತು ಕೊಂಡಿದ್ದರೂ ತೆಳ್ಳಗೆ ತುಂಡು ಮಾಡಿ ಬಿಸಿಲಿನಲ್ಲಿ ಒ‍ಣಗಿಸಿ ಡಬ್ಬಿಯಲ್ಲಿ ಹಾಕಿ ಇಡಲಿಲ್ಲ. ಎಲ್ಲಾ ನಮೂನೆಯ ಕಾಡು ಮಾವಿನ ಹಣ್ಣುಗಳಿದ್ದರೂ ಮಾಂಬಳದ ಚಾಪೆ ಹೊರ ತೆಗೆಯಲಾಗಲೇ ಇಲ್ಲ. ಪ್ರತಿ ವರುಷದಂತೆ ಈ ವರ್ಷ ಇಲ್ಲ. ಪ್ರಕೃತಿಯ ಮನಸಲ್ಲೇನು ಓಡುತ್ತಿದೆ ನಮಗರ್ಥವಾಗುತ್ತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೃದಯದ ಬಡಿತ ಲೆಕ್ಕಕ್ಕೇ ಸಿಗುತ್ತಿಲ್ಲ. ಯಾಕೋ ಗೊತ್ತಿಲ್ಲ , ಬದಲಾಗುತ್ತಿರುವುದು ನಾವು …..ನಮ್ಮ ಬದುಕೋ ? ಪ್ರಕೃತಿಯೋ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago