Advertisement
ಕಿಟಕಿ

ಅರ್ಥವಾಗದ ಮಳೆಯ ನಾಡಿಬಡಿತ…….! | ಅಡುಗೆ ಮನೆಯ ಕಿಟಿಕಿಯಾಚೆಗಿನ ನೋಟ..

Share

ಮಳೆಗಾಲದ ದಿನಗಳೆಂದರೆ ನಮ್ಮ ಕರಾವಳಿ , ಮಲೆನಾಡು, ಹಳ್ಳಿ ಪ್ರದೇಶಗಳಲ್ಲಿ ಒಂದು ರೀತಿಯ ವನವಾಸವೇ. ಹಾಗಂತ ಕಾಡಲ್ಲೇ ಇರುತ್ತೀರಾ ಅಂತ ಕೇಳ ಬೇಡಿ.ಅಂದರೆ, ಸಿಕ್ಕಾಪಟ್ಟೆ ಸುರಿಯುವ ಮಳೆಗೆ ಮನೆಯಿಂದ ಹೊರಬರಲಾಗದ ಸ್ಥಿತಿ.  ಅಷ್ಟೇ…!. ಮಳೆಗಾಲ ಒಬ್ಬೊಬ್ಬರದು ಒಂದೊಂದು ಮಾತಾದರೆ, ಅಡುಗೆ ಮನೆಯ ಒಳಗಿನಿಂದ ವಿಷಯವೇ ಬೇರೆ..!, ಇಲ್ಲೀಗ ಇಲ್ಲಗಳ ವಿಷಯ..!.

ಬೇಸಿಗೆಯಲ್ಲಿ ಮನೆಯ ಹಿತ್ತಿಲಿನಲ್ಲಿ ನಮೂನೆವಾರು ತರಕಾರಿಗಳನ್ನು ಬೆಳೆಸಿ , ನಿತ್ಯ ತಟ್ಟೆ ತುಂಬಾ ಅನ್ನಕ್ಕಿಂತ ಜಾಸ್ತಿ ತರಕಾರಿ ಹೋಳುಗಳನ್ನೇ ಊಟ ಮಾಡುವವರಿಗೆ ದಿಡೀರ್ ಕೈ ಬಾಯಿ ಕಟ್ಟಿದಂತಾಗುತ್ತದೆ. ಸೌತೆಕಾಯಿ , ಕುಂಬಳಕಾಯಿ, ಚೀನಿಕಾಯಿಗಳು ಸ್ವಲ್ಪ ದಿನ ಉಳಿವಂತಹ ತರಕಾರಿಗಳು. ಮನೆಯಲ್ಲಿ ಇವುಗಳಿದ್ದರೆ ಏನೋ ಧೈರ್ಯ. ಈ ಮಳೆಗೆ ಯಾವುದೇ ತರಕಾರಿಗಳೂ ಬೆಳೆಯದು. ಹರಿವೆ , ಬಸಳೆಯಂತೂ ಕೊಳೆತೇ ಹೋಗುವುದು. ಜೋರುಮಳೆಗೆ ಮೊದಲೇ ಗಿಡ ದೊಡ್ಡದಾಗಲಿ ಎಂದು ಸಾಲು ತಯಾರಿಸಿ ಬೀಜ ಹಾಕಿ ಗಿಡ ಮಾಡಿದರೆ ಈ ಜಡಿ ಮಳೆಗೆ ಹುಟ್ಟಿದ ಗಿಡವೂ ಕೊಳೆತೇ ಹೋಯಿತು. ಎಂದಿಗಿಂತ ಮೊದಲೇ ಸುರಿದ ಮಳೆ ಈ ಬಾರಿ ಮಳೆಗಾಲದ ತಯಾರಿಗೂ ಅವಕಾಶ ಕೊಡಲಿಲ್ಲ. ಸಾವಿರಗಟ್ಟಲೆ ಅಲ್ಲವಾದರೂ ನೂರರ ಸಂಖ್ಯೆಯ ಹಪ್ಪಳವೂ ಮಾಡಲಾಗಲಿಲ್ಲ. ಚೆನ್ನಾಗಿ ಬಲಿತ ಬಾಳೆಗೊನೆಗಳು ನೇತು ಕೊಂಡಿದ್ದರೂ ತೆಳ್ಳಗೆ ತುಂಡು ಮಾಡಿ ಬಿಸಿಲಿನಲ್ಲಿ ಒ‍ಣಗಿಸಿ ಡಬ್ಬಿಯಲ್ಲಿ ಹಾಕಿ ಇಡಲಿಲ್ಲ. ಎಲ್ಲಾ ನಮೂನೆಯ ಕಾಡು ಮಾವಿನ ಹಣ್ಣುಗಳಿದ್ದರೂ ಮಾಂಬಳದ ಚಾಪೆ ಹೊರ ತೆಗೆಯಲಾಗಲೇ ಇಲ್ಲ. ಪ್ರತಿ ವರುಷದಂತೆ ಈ ವರ್ಷ ಇಲ್ಲ. ಪ್ರಕೃತಿಯ ಮನಸಲ್ಲೇನು ಓಡುತ್ತಿದೆ ನಮಗರ್ಥವಾಗುತ್ತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೃದಯದ ಬಡಿತ ಲೆಕ್ಕಕ್ಕೇ ಸಿಗುತ್ತಿಲ್ಲ. ಯಾಕೋ ಗೊತ್ತಿಲ್ಲ , ಬದಲಾಗುತ್ತಿರುವುದು ನಾವು …..ನಮ್ಮ ಬದುಕೋ ? ಪ್ರಕೃತಿಯೋ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

7 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

22 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

22 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago