Advertisement
ಕಿಟಕಿ

ಅರ್ಥವಾಗದ ಮಳೆಯ ನಾಡಿಬಡಿತ…….! | ಅಡುಗೆ ಮನೆಯ ಕಿಟಿಕಿಯಾಚೆಗಿನ ನೋಟ..

Share

ಮಳೆಗಾಲದ ದಿನಗಳೆಂದರೆ ನಮ್ಮ ಕರಾವಳಿ , ಮಲೆನಾಡು, ಹಳ್ಳಿ ಪ್ರದೇಶಗಳಲ್ಲಿ ಒಂದು ರೀತಿಯ ವನವಾಸವೇ. ಹಾಗಂತ ಕಾಡಲ್ಲೇ ಇರುತ್ತೀರಾ ಅಂತ ಕೇಳ ಬೇಡಿ.ಅಂದರೆ, ಸಿಕ್ಕಾಪಟ್ಟೆ ಸುರಿಯುವ ಮಳೆಗೆ ಮನೆಯಿಂದ ಹೊರಬರಲಾಗದ ಸ್ಥಿತಿ.  ಅಷ್ಟೇ…!. ಮಳೆಗಾಲ ಒಬ್ಬೊಬ್ಬರದು ಒಂದೊಂದು ಮಾತಾದರೆ, ಅಡುಗೆ ಮನೆಯ ಒಳಗಿನಿಂದ ವಿಷಯವೇ ಬೇರೆ..!, ಇಲ್ಲೀಗ ಇಲ್ಲಗಳ ವಿಷಯ..!.

ಬೇಸಿಗೆಯಲ್ಲಿ ಮನೆಯ ಹಿತ್ತಿಲಿನಲ್ಲಿ ನಮೂನೆವಾರು ತರಕಾರಿಗಳನ್ನು ಬೆಳೆಸಿ , ನಿತ್ಯ ತಟ್ಟೆ ತುಂಬಾ ಅನ್ನಕ್ಕಿಂತ ಜಾಸ್ತಿ ತರಕಾರಿ ಹೋಳುಗಳನ್ನೇ ಊಟ ಮಾಡುವವರಿಗೆ ದಿಡೀರ್ ಕೈ ಬಾಯಿ ಕಟ್ಟಿದಂತಾಗುತ್ತದೆ. ಸೌತೆಕಾಯಿ , ಕುಂಬಳಕಾಯಿ, ಚೀನಿಕಾಯಿಗಳು ಸ್ವಲ್ಪ ದಿನ ಉಳಿವಂತಹ ತರಕಾರಿಗಳು. ಮನೆಯಲ್ಲಿ ಇವುಗಳಿದ್ದರೆ ಏನೋ ಧೈರ್ಯ. ಈ ಮಳೆಗೆ ಯಾವುದೇ ತರಕಾರಿಗಳೂ ಬೆಳೆಯದು. ಹರಿವೆ , ಬಸಳೆಯಂತೂ ಕೊಳೆತೇ ಹೋಗುವುದು. ಜೋರುಮಳೆಗೆ ಮೊದಲೇ ಗಿಡ ದೊಡ್ಡದಾಗಲಿ ಎಂದು ಸಾಲು ತಯಾರಿಸಿ ಬೀಜ ಹಾಕಿ ಗಿಡ ಮಾಡಿದರೆ ಈ ಜಡಿ ಮಳೆಗೆ ಹುಟ್ಟಿದ ಗಿಡವೂ ಕೊಳೆತೇ ಹೋಯಿತು. ಎಂದಿಗಿಂತ ಮೊದಲೇ ಸುರಿದ ಮಳೆ ಈ ಬಾರಿ ಮಳೆಗಾಲದ ತಯಾರಿಗೂ ಅವಕಾಶ ಕೊಡಲಿಲ್ಲ. ಸಾವಿರಗಟ್ಟಲೆ ಅಲ್ಲವಾದರೂ ನೂರರ ಸಂಖ್ಯೆಯ ಹಪ್ಪಳವೂ ಮಾಡಲಾಗಲಿಲ್ಲ. ಚೆನ್ನಾಗಿ ಬಲಿತ ಬಾಳೆಗೊನೆಗಳು ನೇತು ಕೊಂಡಿದ್ದರೂ ತೆಳ್ಳಗೆ ತುಂಡು ಮಾಡಿ ಬಿಸಿಲಿನಲ್ಲಿ ಒ‍ಣಗಿಸಿ ಡಬ್ಬಿಯಲ್ಲಿ ಹಾಕಿ ಇಡಲಿಲ್ಲ. ಎಲ್ಲಾ ನಮೂನೆಯ ಕಾಡು ಮಾವಿನ ಹಣ್ಣುಗಳಿದ್ದರೂ ಮಾಂಬಳದ ಚಾಪೆ ಹೊರ ತೆಗೆಯಲಾಗಲೇ ಇಲ್ಲ. ಪ್ರತಿ ವರುಷದಂತೆ ಈ ವರ್ಷ ಇಲ್ಲ. ಪ್ರಕೃತಿಯ ಮನಸಲ್ಲೇನು ಓಡುತ್ತಿದೆ ನಮಗರ್ಥವಾಗುತ್ತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೃದಯದ ಬಡಿತ ಲೆಕ್ಕಕ್ಕೇ ಸಿಗುತ್ತಿಲ್ಲ. ಯಾಕೋ ಗೊತ್ತಿಲ್ಲ , ಬದಲಾಗುತ್ತಿರುವುದು ನಾವು …..ನಮ್ಮ ಬದುಕೋ ? ಪ್ರಕೃತಿಯೋ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago