ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಇಲಾಖೆಯ ಪವರ್ ಮ್ಯಾನ್ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.
ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್ ಮ್ಯಾನ್ ಸ್ಥಳಕ್ಕೆ ತೆರಳಿ ವಿದ್ಯುತ್ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್ ಸಂಪರ್ಕ ಸಾಧ್ಯವಾಗುತ್ತಿದೆ.
ಚೆಂಬು ಪ್ರದೇಶದಲ್ಲಿನ ಪವರ್ ಮ್ಯಾನ್ ಬಸವರಾಜ್ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…