ಭಾರೀ ಮಳೆಗೆ ಎಲ್ಲೆಡೆಯೂ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಮನೆಯಲ್ಲೇ ಕುಳಿತಿರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಟಿ ವಿ ಸೇರಿದಂತೆ ಮೊಬೈಲ್ ವೀಕ್ಷಣೆ ಹೆಚ್ಚಿರುತ್ತದೆ. ಆದರೆ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಇಲಾಖೆಯ ಪವರ್ ಮ್ಯಾನ್ ತಂಡದ ಕೆಲಸಗಳಿಗೆ ಸಲಾಂ ಹೇಳಬೇಕಿದೆ.
ಮಳೆಯ ನಡುವೆ ಏಣಿಯ ಮೂಲಕ ಕಂಬ ಏರಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿರುತ್ತಾರೆ. ಅದರಲ್ಲೂ ಈಗಾಗಲೇ ಭೂಕಂಪನ ಹಾಗೂ ಭೂಕುಸಿತದ ಭಯದಿಂದ ಇರುವ ಊರಾದ ಸಂಪಾಜೆ – ಚೆಂಬು ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವುದೇ ಸಾಹಸದ ಕೆಲಸ. ಗ್ರಾಮೀಣ ಭಾಗದಲ್ಲಿ ಗಾಳಿ ಮಳೆಗೆ ಮರ ಬೀಳುವುದು , ಮರದ ಗೆಲ್ಲು ಬೀಳುವುದು ಎಚ್ ಟಿ ತಂತಿ ಸಮಸ್ಯೆಯಾಗುವುದು ಇದ್ದೇ ಇರುತ್ತದೆ. ಈ ಸಮಯದಲ್ಲಿ ಮಳೆ-ಗಾಳಿ ಎಂದು ಲೆಕ್ಕಿಸದೆ ಪವರ್ ಮ್ಯಾನ್ ಸ್ಥಳಕ್ಕೆ ತೆರಳಿ ವಿದ್ಯುತ್ ಸುಸ್ಥಿತಿಗೆ ತರಲು ಪ್ರಯತ್ನ ಪಡುತ್ತಿರುತ್ತಾರೆ. ಇಂತಹ ಕೆಲಸಗಳಿಂದಲೇ ಪ್ರತೀ ಮನೆಗೂ ವಿದ್ಯುತ್ ಸಂಪರ್ಕ ಸಾಧ್ಯವಾಗುತ್ತಿದೆ.
ಚೆಂಬು ಪ್ರದೇಶದಲ್ಲಿನ ಪವರ್ ಮ್ಯಾನ್ ಬಸವರಾಜ್ ಅವರ ಕೆಲಸವನ್ನು ಚೆಂಬು ಪ್ರದೇಶದ ಆನಂದ ಅವರು ವಿಡಿಯೋ ಮಾಡಿ ಕಳುಹಿಸಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…