ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ ಹೊಸೋಳಿಕೆ ಎಂಬಲ್ಲಿ ಯುವಕ ಬಲಿಯಾಗಿದ್ದಾನೆ. ಇದೇ ವೇಳೆ ಕೊಡಗಿನಲ್ಲಿ ಕಾರ್ಮಿಕ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹೊಸೋಳಿಕೆ ಬಳಿಯ ಪರ್ವತಮುಖಿಯ ಸೋಮಸುಂದರ ಎಂಬ ಯುವಕ ಬಲಿಯಾಗಿದ್ದಾರೆ.ಮಳೆ ಆರಂಭದ ವೇಳೆ ಅಂಗಳದಲ್ಲಿ ಅಡಿಕೆ ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ವೇಳೆ ಮಡಿಕೇರಿ ಬಳಿಯ ಬೆಟ್ಟಗೇರಿಯಲ್ಲಿ ಸಿಡಿಲಿನ ಆಘಾತಕ್ಕೆ ಮನೆ ಬಳಿ ನಿಂತಿದ್ದ ಕಾರ್ಮಿಕ ಪ್ರಮಾತ್ ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…