ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಯಿತು. ಸಿಡಿಲಿನ ಅಬ್ಬರಕೆ ಸುಬ್ರಹ್ಮಣ್ಯ ಬಳಿಯ ಹೊಸೋಳಿಕೆ ಎಂಬಲ್ಲಿ ಯುವಕ ಬಲಿಯಾಗಿದ್ದಾನೆ. ಇದೇ ವೇಳೆ ಕೊಡಗಿನಲ್ಲಿ ಕಾರ್ಮಿಕ ಗಾಯಗೊಂಡಿದ್ದಾನೆ. ಆಸ್ಪತ್ರೆಯಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲಿಗೆ ಹೊಸೋಳಿಕೆ ಬಳಿಯ ಪರ್ವತಮುಖಿಯ ಸೋಮಸುಂದರ ಎಂಬ ಯುವಕ ಬಲಿಯಾಗಿದ್ದಾರೆ.ಮಳೆ ಆರಂಭದ ವೇಳೆ ಅಂಗಳದಲ್ಲಿ ಅಡಿಕೆ ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಇದೇ ವೇಳೆ ಮಡಿಕೇರಿ ಬಳಿಯ ಬೆಟ್ಟಗೇರಿಯಲ್ಲಿ ಸಿಡಿಲಿನ ಆಘಾತಕ್ಕೆ ಮನೆ ಬಳಿ ನಿಂತಿದ್ದ ಕಾರ್ಮಿಕ ಪ್ರಮಾತ್ ಗಾಯಗೊಂಡಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…