ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…