ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಭಾರೀ ಗಾಳಿ ಹಾಗೂ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ ಗಾಳಿ ಜೋರಾಗಿ ಬೀಸುತ್ತಿದೆ. ಜೊತೆಗೆ ಮಳೆಯೂ ಸುರಿಯುತ್ತಿದೆ. ಹೀಗಾಗಿ ಗ್ರಾಮೀಣ ಭಾಗ ಸೇರಿದಂತೆ ಅಲ್ಲಲ್ಲಿ ಮರಗಳು ಉರುಳಿ ಬಿದ್ದು ಹಾನಿಯಾಗಿದೆ. ವಿದ್ಯುತ್ ಸಂಪರ್ಕಕ್ಕೂ ಕಷ್ಟವಾಗಿದೆ.
ಉಪ್ಪಿನಂಗಡಿ ಬಳಿ ಭಾರೀ ಗಾಳಿಯ ಕಾರಣದಿಂದ ಕಟ್ಟವೊಂದರ ಶೀಟ್ ಹಾರಿದೆ. ಪುತ್ತೂರಿನಲ್ಲಿ ಬನ್ನೂರು ಶಾಲೆಯ ಬಳಿ ಕರ್ಮಲದಲ್ಲಿ ರಸ್ತೆಗೆ ಮರ ಬಿದ್ದಿದೆ. ಪೆರ್ನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಉರುಳಿ ಬಿದ್ದಿದೆ.ಶಿರಾಡಿಯ ಅಡ್ಡಹೊಳೆ ಬಳಿಯೂ ಹೆದ್ದಾರಿಗೆ ಮರ ಉರುಳಿ ಬಿದ್ದಿದೆ. ಗ್ರಾಮೀಣ ಭಾಗದ ರಸ್ತೆಗಳಲ್ಲೂ ಮರ ಉರುಳಿ ವಾಹನ ಓಡಾಟಕ್ಕೆ ಕಷ್ಟವಾಗಿತ್ತು. ಮಳೆ ಹಾಗೂ ಗಾಳಿ ನಿರಂತರವಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…