ತಡರಾತ್ರಿಯೂ ಭಾರೀ ಮಳೆ | ದ್ವೀಪವಾದ ಕಲ್ಮಕಾರು | ಸಂಪಾಜೆಯಲ್ಲೂ ಮಳೆ | ಉಕ್ಕಿದ ಪಯಸ್ವಿನಿ ನದಿ | ಕಲ್ಲುಗುಂಡಿಯಲ್ಲೂ ನೀರೇ ನೀರು | ಕಲ್ಲಾಜೆಯಲ್ಲಿ ಮನೆ ಕುಸಿತ |

August 2, 2022
7:24 AM

ಸೋಮವಾರ ರಾತ್ರಿಯಿಂದ ಪಶ್ಚಿಮ ಘಟ್ಟದ ಪ್ರದೇಶಗಳಾದ ಕಲ್ಮಕಾರು, ಕೊಲ್ಲಮೊಗ್ರ, ಸಂಪಾಜೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪವಾಗಿದೆ. ಅನೇಕ ಜನರು ಅತಂತ್ರವಾಗಿದ್ದಾರೆ. ಸಂಪರ್ಕಗಳು ಕಡಿತಗೊಂಡಿದೆ. ಕಲ್ಲಾಜೆಯಲ್ಲಿ ಮನೆ ಕುಸಿತವಾಗಿದೆ. ಗೀತಾ ಎಂಬವರ ಮನೆ ಕುಸಿದಿದೆ.

Advertisement
Advertisement
Advertisement
Advertisement
ಕಲ್ಲಾಜೆಯಲ್ಲಿ ಮನೆ ಕುಸಿತ

ಕಲ್ಮಕಾರು ಪ್ರದೇಶದಲ್ಲಿ  ತಡರಾತ್ರಿ ಭಾರೀ ಸದ್ದಿನೊಂದಿಗೆ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅದಾದ ಬಳಿಕ ಪ್ರವಾಹದ ಮಾದರಿಯಲ್ಲಿ ನೀರು ಹರಿದಿದೆ. ಕಲ್ಮಕಾರು ಪೇಟೆಯ ಸಮೀಪದವರೆಗೂ ಹೊಳೆಯ ನೀರು ಹರಿಯುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

ನಿನ್ನೆಯಿಂದ ಕಲ್ಮಕಾರು ಪ್ರದೇಶ ಸಂಪರ್ಕ ಕಡಿತಗೊಂಡಿದೆ ಭಾರೀ ಮಳೆಯಾಗಿದೆ.ಕಲ್ಮಕಾರು ದ್ವೀಪವಾದಂತಾಗಿದೆ. ಸಂಪರ್ಕ ಕಡಿತಗೊಂಡಿದೆ ಎಂದು ಗಣೇಶ್‌ ಭಟ್‌ ಇಡ್ಯಡ್ಕ ತಿಳಿಸಿದ್ದಾರೆ.

ತಡರಾತ್ರಿಯೂ ಭಾರೀ ಮಳೆ ಸುರಿಯುತ್ತಿತ್ತು. ಎಲ್ಲಾ ಹೊಳೆ, ನದಿಗಳೂ ತುಂಬಿ ಹರಿದಿದೆ. ನದಿಯ ನೀರಿನ ಮಟ್ಟ ಏರಿದ ಕಾರಣ ಸ್ಥಳೀಯಾದ ಸಣ್ಣ ತೋಡುಗಳಲ್ಲಿಯೂ ನೀರು ನಿಂತಿದೆ ಎಂದು ಉದಯ ಶಿವಾಲ ತಿಳಿಸಿದರು.

Advertisement

ಸಂಪಾಜೆ ಪರಿಸರದಲ್ಲೂ ಭಾರೀ ಸದ್ದಿನೊಂದಿಗೆ ಮಳೆ ಆರಂಭವಾಗಿ, ಭೀಕರ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ತಡರಾತ್ರಿ ಕಲ್ಲುಗುಂಡಿ ಪ್ರದೇಶಕ್ಕೆ ನೀರು ನುಗ್ಗಿದೆ.  ಇಡೀ ಕಲ್ಲುಗುಂಡಿ ಪೇಟೆ ಜಲಾವೃತವಾಗಿದೆ.ಜನರನ್ನು ಸುರಕ್ಷಿತ ಜಾಗಕ್ಕೆ ಕರೆದೊಯ್ಯುವ ಕೆಲಸ ನಡೆದಿದೆ.

Advertisement
ಭೀಕರ ಮಳೆ....!

ಸುಳ್ಯ ತಾಲೂಕಿನ ಇತಿಹಾಸದಲ್ಲಿ ಇದುವರೆಗೆ ಇಂತಹ ಭೀಕರ ಮಳೆ ದಾಖಲು ಆಗಿರಲಿಲ್ಲ. ಸುಮಾರು 75 ವರ್ಷಗಳಲ್ಲಿ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಕಲ್ಲಾಜೆ ಸೇತುವೆ ಮುಳುಗಡೆಯಾಗಿರಲಿಲ್ಲ. ಸೋಮವಾರ ರಾತ್ರಿ ಸೇತುವೆ ಮುಳುಗಡೆಯಾಗಿದೆ. ಸುಮಾರು 30 ವರ್ಷಗಳ ಮಳೆ ಮಾಹಿತಿ ಪ್ರಕಾರ ಇದುವರೆಗೂ ಇಂತಹ ಮಳೆ ಬಂದಿರಲಿಲ್ಲ ಎಂದು ಕೊಲ್ಲಮೊಗ್ರದ ಕೇಶವ ಕಟ್ಟ ಹೇಳುತ್ತಾರೆ. ಕೊಲ್ಲಮೊಗ್ರದಲ್ಲಿ  302 ಮಿಮೀ ಮಳೆಯಾದರೆ ಕಲ್ಲಾಜೆಯಲ್ಲಿ 400 ಮಿಮೀಗಿಂತ ಅಧಿಕ ಮಳೆಯಾಗಿದೆ.

Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror