ತಡರಾತ್ರಿಯೂ ಭಾರೀ ಮಳೆ | ದ್ವೀಪವಾದ ಕಲ್ಮಕಾರು | ಸಂಪಾಜೆಯಲ್ಲೂ ಮಳೆ | ಉಕ್ಕಿದ ಪಯಸ್ವಿನಿ ನದಿ | ಕಲ್ಲುಗುಂಡಿಯಲ್ಲೂ ನೀರೇ ನೀರು | ಕಲ್ಲಾಜೆಯಲ್ಲಿ ಮನೆ ಕುಸಿತ |

August 2, 2022
7:24 AM

ಸೋಮವಾರ ರಾತ್ರಿಯಿಂದ ಪಶ್ಚಿಮ ಘಟ್ಟದ ಪ್ರದೇಶಗಳಾದ ಕಲ್ಮಕಾರು, ಕೊಲ್ಲಮೊಗ್ರ, ಸಂಪಾಜೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪವಾಗಿದೆ. ಅನೇಕ ಜನರು ಅತಂತ್ರವಾಗಿದ್ದಾರೆ. ಸಂಪರ್ಕಗಳು ಕಡಿತಗೊಂಡಿದೆ. ಕಲ್ಲಾಜೆಯಲ್ಲಿ ಮನೆ ಕುಸಿತವಾಗಿದೆ. ಗೀತಾ ಎಂಬವರ ಮನೆ ಕುಸಿದಿದೆ.

Advertisement
Advertisement
ಕಲ್ಲಾಜೆಯಲ್ಲಿ ಮನೆ ಕುಸಿತ

ಕಲ್ಮಕಾರು ಪ್ರದೇಶದಲ್ಲಿ  ತಡರಾತ್ರಿ ಭಾರೀ ಸದ್ದಿನೊಂದಿಗೆ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅದಾದ ಬಳಿಕ ಪ್ರವಾಹದ ಮಾದರಿಯಲ್ಲಿ ನೀರು ಹರಿದಿದೆ. ಕಲ್ಮಕಾರು ಪೇಟೆಯ ಸಮೀಪದವರೆಗೂ ಹೊಳೆಯ ನೀರು ಹರಿಯುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ನಿನ್ನೆಯಿಂದ ಕಲ್ಮಕಾರು ಪ್ರದೇಶ ಸಂಪರ್ಕ ಕಡಿತಗೊಂಡಿದೆ ಭಾರೀ ಮಳೆಯಾಗಿದೆ.ಕಲ್ಮಕಾರು ದ್ವೀಪವಾದಂತಾಗಿದೆ. ಸಂಪರ್ಕ ಕಡಿತಗೊಂಡಿದೆ ಎಂದು ಗಣೇಶ್‌ ಭಟ್‌ ಇಡ್ಯಡ್ಕ ತಿಳಿಸಿದ್ದಾರೆ.

ತಡರಾತ್ರಿಯೂ ಭಾರೀ ಮಳೆ ಸುರಿಯುತ್ತಿತ್ತು. ಎಲ್ಲಾ ಹೊಳೆ, ನದಿಗಳೂ ತುಂಬಿ ಹರಿದಿದೆ. ನದಿಯ ನೀರಿನ ಮಟ್ಟ ಏರಿದ ಕಾರಣ ಸ್ಥಳೀಯಾದ ಸಣ್ಣ ತೋಡುಗಳಲ್ಲಿಯೂ ನೀರು ನಿಂತಿದೆ ಎಂದು ಉದಯ ಶಿವಾಲ ತಿಳಿಸಿದರು.

ಸಂಪಾಜೆ ಪರಿಸರದಲ್ಲೂ ಭಾರೀ ಸದ್ದಿನೊಂದಿಗೆ ಮಳೆ ಆರಂಭವಾಗಿ, ಭೀಕರ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ತಡರಾತ್ರಿ ಕಲ್ಲುಗುಂಡಿ ಪ್ರದೇಶಕ್ಕೆ ನೀರು ನುಗ್ಗಿದೆ.  ಇಡೀ ಕಲ್ಲುಗುಂಡಿ ಪೇಟೆ ಜಲಾವೃತವಾಗಿದೆ.ಜನರನ್ನು ಸುರಕ್ಷಿತ ಜಾಗಕ್ಕೆ ಕರೆದೊಯ್ಯುವ ಕೆಲಸ ನಡೆದಿದೆ.

Advertisement

ಭೀಕರ ಮಳೆ....!

ಸುಳ್ಯ ತಾಲೂಕಿನ ಇತಿಹಾಸದಲ್ಲಿ ಇದುವರೆಗೆ ಇಂತಹ ಭೀಕರ ಮಳೆ ದಾಖಲು ಆಗಿರಲಿಲ್ಲ. ಸುಮಾರು 75 ವರ್ಷಗಳಲ್ಲಿ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಕಲ್ಲಾಜೆ ಸೇತುವೆ ಮುಳುಗಡೆಯಾಗಿರಲಿಲ್ಲ. ಸೋಮವಾರ ರಾತ್ರಿ ಸೇತುವೆ ಮುಳುಗಡೆಯಾಗಿದೆ. ಸುಮಾರು 30 ವರ್ಷಗಳ ಮಳೆ ಮಾಹಿತಿ ಪ್ರಕಾರ ಇದುವರೆಗೂ ಇಂತಹ ಮಳೆ ಬಂದಿರಲಿಲ್ಲ ಎಂದು ಕೊಲ್ಲಮೊಗ್ರದ ಕೇಶವ ಕಟ್ಟ ಹೇಳುತ್ತಾರೆ. ಕೊಲ್ಲಮೊಗ್ರದಲ್ಲಿ  302 ಮಿಮೀ ಮಳೆಯಾದರೆ ಕಲ್ಲಾಜೆಯಲ್ಲಿ 400 ಮಿಮೀಗಿಂತ ಅಧಿಕ ಮಳೆಯಾಗಿದೆ.

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group