Advertisement
ಸುದ್ದಿಗಳು

ತಡರಾತ್ರಿಯೂ ಭಾರೀ ಮಳೆ | ದ್ವೀಪವಾದ ಕಲ್ಮಕಾರು | ಸಂಪಾಜೆಯಲ್ಲೂ ಮಳೆ | ಉಕ್ಕಿದ ಪಯಸ್ವಿನಿ ನದಿ | ಕಲ್ಲುಗುಂಡಿಯಲ್ಲೂ ನೀರೇ ನೀರು | ಕಲ್ಲಾಜೆಯಲ್ಲಿ ಮನೆ ಕುಸಿತ |

Share

ಸೋಮವಾರ ರಾತ್ರಿಯಿಂದ ಪಶ್ಚಿಮ ಘಟ್ಟದ ಪ್ರದೇಶಗಳಾದ ಕಲ್ಮಕಾರು, ಕೊಲ್ಲಮೊಗ್ರ, ಸಂಪಾಜೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಕಲ್ಮಕಾರು, ಕಲ್ಲುಗುಂಡಿ ಪ್ರದೇಶಗಳು ದ್ವೀಪವಾಗಿದೆ. ಅನೇಕ ಜನರು ಅತಂತ್ರವಾಗಿದ್ದಾರೆ. ಸಂಪರ್ಕಗಳು ಕಡಿತಗೊಂಡಿದೆ. ಕಲ್ಲಾಜೆಯಲ್ಲಿ ಮನೆ ಕುಸಿತವಾಗಿದೆ. ಗೀತಾ ಎಂಬವರ ಮನೆ ಕುಸಿದಿದೆ.

Advertisement
Advertisement
ಕಲ್ಲಾಜೆಯಲ್ಲಿ ಮನೆ ಕುಸಿತ

ಕಲ್ಮಕಾರು ಪ್ರದೇಶದಲ್ಲಿ  ತಡರಾತ್ರಿ ಭಾರೀ ಸದ್ದಿನೊಂದಿಗೆ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅದಾದ ಬಳಿಕ ಪ್ರವಾಹದ ಮಾದರಿಯಲ್ಲಿ ನೀರು ಹರಿದಿದೆ. ಕಲ್ಮಕಾರು ಪೇಟೆಯ ಸಮೀಪದವರೆಗೂ ಹೊಳೆಯ ನೀರು ಹರಿಯುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

ನಿನ್ನೆಯಿಂದ ಕಲ್ಮಕಾರು ಪ್ರದೇಶ ಸಂಪರ್ಕ ಕಡಿತಗೊಂಡಿದೆ ಭಾರೀ ಮಳೆಯಾಗಿದೆ.ಕಲ್ಮಕಾರು ದ್ವೀಪವಾದಂತಾಗಿದೆ. ಸಂಪರ್ಕ ಕಡಿತಗೊಂಡಿದೆ ಎಂದು ಗಣೇಶ್‌ ಭಟ್‌ ಇಡ್ಯಡ್ಕ ತಿಳಿಸಿದ್ದಾರೆ.

ತಡರಾತ್ರಿಯೂ ಭಾರೀ ಮಳೆ ಸುರಿಯುತ್ತಿತ್ತು. ಎಲ್ಲಾ ಹೊಳೆ, ನದಿಗಳೂ ತುಂಬಿ ಹರಿದಿದೆ. ನದಿಯ ನೀರಿನ ಮಟ್ಟ ಏರಿದ ಕಾರಣ ಸ್ಥಳೀಯಾದ ಸಣ್ಣ ತೋಡುಗಳಲ್ಲಿಯೂ ನೀರು ನಿಂತಿದೆ ಎಂದು ಉದಯ ಶಿವಾಲ ತಿಳಿಸಿದರು.

Advertisement

ಸಂಪಾಜೆ ಪರಿಸರದಲ್ಲೂ ಭಾರೀ ಸದ್ದಿನೊಂದಿಗೆ ಮಳೆ ಆರಂಭವಾಗಿ, ಭೀಕರ ಮಳೆಯಾಗಿದೆ. ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ತಡರಾತ್ರಿ ಕಲ್ಲುಗುಂಡಿ ಪ್ರದೇಶಕ್ಕೆ ನೀರು ನುಗ್ಗಿದೆ.  ಇಡೀ ಕಲ್ಲುಗುಂಡಿ ಪೇಟೆ ಜಲಾವೃತವಾಗಿದೆ.ಜನರನ್ನು ಸುರಕ್ಷಿತ ಜಾಗಕ್ಕೆ ಕರೆದೊಯ್ಯುವ ಕೆಲಸ ನಡೆದಿದೆ.

Advertisement
ಭೀಕರ ಮಳೆ....!

ಸುಳ್ಯ ತಾಲೂಕಿನ ಇತಿಹಾಸದಲ್ಲಿ ಇದುವರೆಗೆ ಇಂತಹ ಭೀಕರ ಮಳೆ ದಾಖಲು ಆಗಿರಲಿಲ್ಲ. ಸುಮಾರು 75 ವರ್ಷಗಳಲ್ಲಿ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ಕಲ್ಲಾಜೆ ಸೇತುವೆ ಮುಳುಗಡೆಯಾಗಿರಲಿಲ್ಲ. ಸೋಮವಾರ ರಾತ್ರಿ ಸೇತುವೆ ಮುಳುಗಡೆಯಾಗಿದೆ. ಸುಮಾರು 30 ವರ್ಷಗಳ ಮಳೆ ಮಾಹಿತಿ ಪ್ರಕಾರ ಇದುವರೆಗೂ ಇಂತಹ ಮಳೆ ಬಂದಿರಲಿಲ್ಲ ಎಂದು ಕೊಲ್ಲಮೊಗ್ರದ ಕೇಶವ ಕಟ್ಟ ಹೇಳುತ್ತಾರೆ. ಕೊಲ್ಲಮೊಗ್ರದಲ್ಲಿ  302 ಮಿಮೀ ಮಳೆಯಾದರೆ ಕಲ್ಲಾಜೆಯಲ್ಲಿ 400 ಮಿಮೀಗಿಂತ ಅಧಿಕ ಮಳೆಯಾಗಿದೆ.

Advertisement

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

7 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

7 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

11 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

12 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

12 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

14 hours ago