Advertisement
ಸುದ್ದಿಗಳು

ಶಿರಸಿ, ಶಿವಮೊಗ್ಗದಲ್ಲೂ ಉತ್ತಮ ಮಳೆ | ಇನ್ನೂ ಎರಡು ದಿನ ಮಳೆ ಮುನ್ಸೂಚನೆ |

Share

ಬಿಸಿಲಿನಿಂದ ಏರಿದ್ದ ತಾಪಮಾನದ ಕಾರಣದಿಂದ ವಿವಿದೆಡೆ ಮಳೆಯಾಗಿದೆ. ಅದರಲ್ಲೂ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಯಿತು. ಶಿರಸಿ, ಶಿವಮೊಗ್ಗ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ, ಬೆಳ್ತಂಗಡಿ ತಾಲೂಕಿನ ವಿವಿದೆಡೆಯೂ ಮಳೆಯಾಯಿತು.

ಶಿರಸಿಯಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ನಗರ ಪ್ರದೇಶ ಅಸ್ತವ್ಯಸ್ತವಾಯಿತು. ಶಿರಸಿಯ ಪ್ರಸಿದ್ಧ ಮಾರಿಕಾಂಬ ಜಾತ್ರೆಗೂ ತೊಂದರೆಯಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ, ಕೊಡಗಿನ ಚೆಂಬು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಯಿತು.

ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಕಾರಣದಿಂದ ಅಸನಿ ಚಂಡಮಾರುತ ಕಂಡುಬರಲಿದ್ದು  ಕರಾವಳಿ ತೀರ ಅಂದರೆ ಅಂಡಮಾನ್‌ ನಿಕೋಬಾರ್‌ ದ್ವೀಪಗಳ ತೀರದಲ್ಲಿ ಎಲರ್ಟ್‌ ಘೋಷಿಸಲಾಗಿದೆ. ಭಾರತದಲ್ಲೂ ಅಸನಿ ಪ್ರಭಾವ ಕಾಣಲಿದೆ.

ಈ ನಡುವೆ ದಿನದಿಂದ ದಿನಕ್ಕೆ ದೇಶದೆಲ್ಲೆಡೆ ತಾಪಮಾನ ಹೆಚ್ಚಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ  36  ಡಿಗ್ರಿ ಸೆಲ್ಸಿಯಸ್‌ ತಾಪಮಾನ ದೆಹಲಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲೂ 35 ಡಿಗ್ರಿಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

24 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

1 day ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

4 days ago