ಬಿಸಿಲಿನಿಂದ ಏರಿದ್ದ ತಾಪಮಾನದ ಕಾರಣದಿಂದ ವಿವಿದೆಡೆ ಮಳೆಯಾಗಿದೆ. ಅದರಲ್ಲೂ ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಯಿತು. ಶಿರಸಿ, ಶಿವಮೊಗ್ಗ ಪ್ರದೇಶದಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ, ಬೆಳ್ತಂಗಡಿ ತಾಲೂಕಿನ ವಿವಿದೆಡೆಯೂ ಮಳೆಯಾಯಿತು.
ಶಿರಸಿಯಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಸುರಿದ ಭಾರೀ ಮಳೆ ಹಾಗೂ ಗಾಳಿಗೆ ನಗರ ಪ್ರದೇಶ ಅಸ್ತವ್ಯಸ್ತವಾಯಿತು. ಶಿರಸಿಯ ಪ್ರಸಿದ್ಧ ಮಾರಿಕಾಂಬ ಜಾತ್ರೆಗೂ ತೊಂದರೆಯಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ, ಕೊಡಗಿನ ಚೆಂಬು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಯಿತು.
ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣದಿಂದ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ಕಾರಣದಿಂದ ಅಸನಿ ಚಂಡಮಾರುತ ಕಂಡುಬರಲಿದ್ದು ಕರಾವಳಿ ತೀರ ಅಂದರೆ ಅಂಡಮಾನ್ ನಿಕೋಬಾರ್ ದ್ವೀಪಗಳ ತೀರದಲ್ಲಿ ಎಲರ್ಟ್ ಘೋಷಿಸಲಾಗಿದೆ. ಭಾರತದಲ್ಲೂ ಅಸನಿ ಪ್ರಭಾವ ಕಾಣಲಿದೆ.
ಈ ನಡುವೆ ದಿನದಿಂದ ದಿನಕ್ಕೆ ದೇಶದೆಲ್ಲೆಡೆ ತಾಪಮಾನ ಹೆಚ್ಚಾಗುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದೆಹಲಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲೂ 35 ಡಿಗ್ರಿಗಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…