ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಿದೆ.
ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.
ಮಾಹಿತಿ : ಅನನ್ಯ , ಸುಬ್ರಹ್ಮಣ್ಯ
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…