ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಿದೆ.
ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.
ಮಾಹಿತಿ : ಅನನ್ಯ , ಸುಬ್ರಹ್ಮಣ್ಯ
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…