ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಿದೆ.
ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.
ಮಾಹಿತಿ : ಅನನ್ಯ , ಸುಬ್ರಹ್ಮಣ್ಯ
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.