ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಿದೆ.
ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.
ಮಾಹಿತಿ : ಅನನ್ಯ , ಸುಬ್ರಹ್ಮಣ್ಯ
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…