ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ ಒಂದು ಗಂಟೆಯಲ್ಲಿ 65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಿದೆ.
ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.
ಮಾಹಿತಿ : ಅನನ್ಯ , ಸುಬ್ರಹ್ಮಣ್ಯ
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…