Advertisement
ಸುದ್ದಿಗಳು

ಮಳೆಯಬ್ಬರ | ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ | ಗುತ್ತಿಗಾರಿನಲ್ಲಿ ಗಾಳಿಮಳೆ | ಮಡಪ್ಪಾಡಿಯಲ್ಲಿ 60+ ಮಿಮೀ ಮಳೆ |

Share

ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಧಾರಾಕಾರ ಮಳೆಯಾಯಿತು. ಗುತ್ತಿಗಾರಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾದರೆ ಮಡಪ್ಪಾಡಿಯಲ್ಲಿ  ಒಂದು ಗಂಟೆಯಲ್ಲಿ  65 ಮಿಮೀ ಹಾಗೂ ಗುತ್ತಿಗಾರಿನಲ್ಲಿ 45 ಮಿಮೀ ಮಳೆಯಾಯಿತು. 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಮಾರು ಒಂದು ಗಂಟೆಯ ಕಾಲ ಸುರಿದ ಮಳೆ ಭೂಮಿಯನ್ನು ತಂಪಾಗಿಸಿತು. ಕಳೆದ ವಾರವೂ ಉತ್ತಮ ಮಳೆಯಾಗಿದ್ದರೆ ಇದೀಗ ಮತ್ತೆ ಮಳೆಯಾಗುವ ಮೂಲಕ ಭೂಮಿ ತಂಪಾಗಿಸಿತು. ಗುಡುಗು, ಗಾಳಿ, ಮಿಂಚು, ಸಹಿತ, ಮಳೆಯಾಗಿದೆ. ಗುಡುಗು, ಗಾಳಿ  ಕಾರಣ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಿದ್ಯುತ್‌ ಕಡಿತವಾಗಿದೆ.

ಉಳಿದಂತೆ ಗುತ್ತಿಗಾರಿನಲ್ಲಿ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಸಂಜೆ ಧಾರಾಕಾರ ಮಳೆ ಹಾಗೂ ಭಾರೀ ಗಾಳಿಯಾಗಿದೆ. ಹಲವು ಕಡೆಗಳಲ್ಲಿ ಅಡಿಕೆ ಮರ ಉರುಳಿದೆ. ಒಂದು ಗಂಟೆಯಲ್ಲಿ 45 ಮಿಮೀ ಮಳೆಯಾಗಿದೆ. ನಂತರವೂ ಮಳೆಯಾಗುತ್ತಿದೆ.ʼಮಡಪ್ಪಾಡಿಯಲ್ಲಿ ಧಾರಾಕಾರ ಮಳೆಯಾಗಿದ್ದು ಒಂದು ಗಂಟೆಯಲ್ಲಿ 65 ಮಿಮೀಗಿಂತಲೂ ಹೆಚ್ಚು ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಂಜ, ಕಡಬ, ಮರ್ಕಂಜ, ಉಬರಡ್ಕ, ಬಳ್ಪ, ಕೇನ್ಯ, ಹರಿಹರಪಲ್ಲತ್ತಡ್ಕ, ಕೊಲ್ಲಮೊಗ್ರ, ಬಾಳುಗೋಡು, ನೆಲ್ಯಾಡಿ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲೂ ಮಳೆಯಾಗಿದೆ.

ಮಾಹಿತಿ : ಅನನ್ಯ , ಸುಬ್ರಹ್ಮಣ್ಯ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

4 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago