Advertisement
MIRROR FOCUS

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

Share

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.

ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

9 minutes ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

25 minutes ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

30 minutes ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

42 minutes ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

24 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago