ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…