ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…