ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…