ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕು ಸೇರಿದಂತೆ ಖಾನಾಪುರ, ಚಿಕ್ಕೋಡಿ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭ ನದಿ ಸೇರುವ ಖಾನಾಪುರ, ಗೋವಾ ರಾಜ್ಯ ಹೆದ್ದಾರಿ ಮಾರ್ಗದ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದ್ದು, ನೆರಸೆ, ಮಂತುರ್ಗ, ಅಶೋಕ ನಗರ, ಗವಳಿವಾಡ, ಹೆಮ್ಮಡಗ ಸೇರಿದಂತೆ 15ಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದಾಗಿ ಕುಸುಮನಾಳ ಸೇತುವೆ ಕುಸಿದ ಪರಿಣಾಮ, ಜಾಂಬೋಟಿ ಮಾರ್ಗದ ಗೋವಾ ಸಾರಿಗೆ ಸಂಪರ್ಕ ಕಳೆದ ಒಂದು ವಾರದಿಂದ ಸ್ಥಗಿತಗೊಂಡಿದೆ.
ಖಾನಾಪುರ ತಾಲೂಕಿನಾದ್ಯಂತ ಮುಂಗಾರು ಬಿತ್ತನೆ ಮಾಡಿದ್ದ ಭತ್ತದ ಬೆಳೆಯಲ್ಲಿ ನೀರು ತುಂಬಿದ್ದು, ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶ ಜಲಾವೃತವಾಗಿದೆ. ಬೆಳಗಾವಿ ತಾಲೂಕಿನಲ್ಲೂ ವಿಪರೀತ ಮಳೆಯಿಂದಾಗಿ ಕಂಗ್ರಾಳಿ ಖುರ್ದಾ ಗ್ರಾಮದ ಕಾಳಕಟ್ಟಾ ನಾಲೆ ಒಡೆದು 200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರಲಾಗಿದೆ. ಕೃಷ್ಣಾನದಿ ಸೇರಿದಂತೆ ಅದರ ಉಪ ನದಿಗಳಾದ ಮಲಪ್ರಭ, ಘಟಪ್ರಭ, ವೇದಗಂಗಾ, ದೂದಗಂಗಾ, ಪಂಚಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ತುಂಬಿ ಹರಿಯುತ್ತಿದ್ದು, ಇದರ ಪರಿಣಾಮ ಚಿಕ್ಕೋಡಿ ವಿಭಾಗದ 11 ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಸುಮಾರು 22 ಹಳ್ಳಿಗಳು ಸಂಪರ್ಕ ಕಳೆದುಕೊಂಡಿವೆ.
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…