ಮಳೆಗೆ ವಿವಿದೆಡೆ ಬೆಳೆ ಹಾನಿ | ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಸೂಚನೆ

August 25, 2025
8:25 PM

ಬೀದರ್ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ  ಮಳೆಯಿಂದ ಹಾನಿಗಿಡಾದ ಪ್ರದೇಶಗಳಿಗೆ  ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ಈ ವೇಳೆ  ಬೆಳೆ ಹಾನಿ ಕುರಿತು  ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ  ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ, ಬೀದರ ತಹಸಿಲ್ದಾರ್ ರವೀಂದ್ರಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್‍ ಅನ್ಸಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ರಹೀಂ ಖಾನ್,  ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಅನೇಕ ಕಡೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದಿವೆ, ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿವೆ. ಬೆಳೆಗಳಾದ ಹೆಸರು, ಉದ್ದುಬೆಳೆಗಳು ಅತೀ ಹೆಚ್ಚು ಹಾನಿಗೆ ಒಳಗಾಗಿವೆ. ಅಧಿವೇಶನದ ವೇಳೆಯಲ್ಲಿಯೇ ತಾವು ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ, ಕೃಷಿ ಸಚಿವರ ಗಮನಕ್ಕೆ ತಂದಿದ್ದೇವೆ. ಈ ವಿಷಯವು ಸದನದಲ್ಲಿ ಕೂಡ ಚರ್ಚೆಆಗಿದೆ. ಹಾನಿಯ ಸಮೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾನಿಯಿಂದಾಗಿ  ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ತತ್‍ಕ್ಷಣ ಪರಿಹಾರವನ್ನು ನೀಡಲಾಗುತ್ತಿದೆ,  ಹಾನಿಗೀಡಾದ ಮನೆಗಳಿಗೆ ತಕ್ಷಣ 7 ರಿಂದ 10 ಸಾವಿರ ನೀಡಲಾಗುತ್ತಿದೆ. ನಂತರ ಸರ್ವೆಕೈಗೊಂಡು ಪೂರ್ಣ ಪರಿಹಾರ ನೀಡಲಾಗುವುದು. 100 ರಿಂದ 200 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror