Advertisement
MIRROR FOCUS

ಮಳೆಗೆ ವಿವಿದೆಡೆ ಬೆಳೆ ಹಾನಿ | ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಸೂಚನೆ

Share

ಬೀದರ್ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ  ಮಳೆಯಿಂದ ಹಾನಿಗಿಡಾದ ಪ್ರದೇಶಗಳಿಗೆ  ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ಈ ವೇಳೆ  ಬೆಳೆ ಹಾನಿ ಕುರಿತು  ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ  ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ, ಬೀದರ ತಹಸಿಲ್ದಾರ್ ರವೀಂದ್ರಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್‍ ಅನ್ಸಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ರಹೀಂ ಖಾನ್,  ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಅನೇಕ ಕಡೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದಿವೆ, ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿವೆ. ಬೆಳೆಗಳಾದ ಹೆಸರು, ಉದ್ದುಬೆಳೆಗಳು ಅತೀ ಹೆಚ್ಚು ಹಾನಿಗೆ ಒಳಗಾಗಿವೆ. ಅಧಿವೇಶನದ ವೇಳೆಯಲ್ಲಿಯೇ ತಾವು ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ, ಕೃಷಿ ಸಚಿವರ ಗಮನಕ್ಕೆ ತಂದಿದ್ದೇವೆ. ಈ ವಿಷಯವು ಸದನದಲ್ಲಿ ಕೂಡ ಚರ್ಚೆಆಗಿದೆ. ಹಾನಿಯ ಸಮೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾನಿಯಿಂದಾಗಿ  ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ತತ್‍ಕ್ಷಣ ಪರಿಹಾರವನ್ನು ನೀಡಲಾಗುತ್ತಿದೆ,  ಹಾನಿಗೀಡಾದ ಮನೆಗಳಿಗೆ ತಕ್ಷಣ 7 ರಿಂದ 10 ಸಾವಿರ ನೀಡಲಾಗುತ್ತಿದೆ. ನಂತರ ಸರ್ವೆಕೈಗೊಂಡು ಪೂರ್ಣ ಪರಿಹಾರ ನೀಡಲಾಗುವುದು. 100 ರಿಂದ 200 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

18 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

23 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago