Advertisement
MIRROR FOCUS

ಮಳೆಗೆ ವಿವಿದೆಡೆ ಬೆಳೆ ಹಾನಿ | ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ಸೂಚನೆ

Share

ಬೀದರ್ ಜಿಲ್ಲೆಯಲ್ಲಿ ಇತ್ತೀಚಿಗೆ ಸುರಿದ  ಮಳೆಯಿಂದ ಹಾನಿಗಿಡಾದ ಪ್ರದೇಶಗಳಿಗೆ  ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನಿನ್ನೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ಈ ವೇಳೆ  ಬೆಳೆ ಹಾನಿ ಕುರಿತು  ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಈ ಸಂದರ್ಭದಲ್ಲಿ  ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ದೇವಿಕಾ, ಬೀದರ ತಹಸಿಲ್ದಾರ್ ರವೀಂದ್ರಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್‍ ಅನ್ಸಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ರಹೀಂ ಖಾನ್,  ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿ ಅನೇಕ ಕಡೆ ತೀವ್ರ ಹಾನಿಯಾಗಿದೆ. ಮನೆಗಳು ಕುಸಿದಿವೆ, ರೈತರ ಹೊಲದಲ್ಲಿನ ಬೆಳೆಗಳು ನಾಶವಾಗಿವೆ. ಬೆಳೆಗಳಾದ ಹೆಸರು, ಉದ್ದುಬೆಳೆಗಳು ಅತೀ ಹೆಚ್ಚು ಹಾನಿಗೆ ಒಳಗಾಗಿವೆ. ಅಧಿವೇಶನದ ವೇಳೆಯಲ್ಲಿಯೇ ತಾವು ಹಾಗೂ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಂದಾಯ, ಕೃಷಿ ಸಚಿವರ ಗಮನಕ್ಕೆ ತಂದಿದ್ದೇವೆ. ಈ ವಿಷಯವು ಸದನದಲ್ಲಿ ಕೂಡ ಚರ್ಚೆಆಗಿದೆ. ಹಾನಿಯ ಸಮೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಹಾನಿಯಿಂದಾಗಿ  ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ತತ್‍ಕ್ಷಣ ಪರಿಹಾರವನ್ನು ನೀಡಲಾಗುತ್ತಿದೆ,  ಹಾನಿಗೀಡಾದ ಮನೆಗಳಿಗೆ ತಕ್ಷಣ 7 ರಿಂದ 10 ಸಾವಿರ ನೀಡಲಾಗುತ್ತಿದೆ. ನಂತರ ಸರ್ವೆಕೈಗೊಂಡು ಪೂರ್ಣ ಪರಿಹಾರ ನೀಡಲಾಗುವುದು. 100 ರಿಂದ 200 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಆ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯಾ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಮತ್ತಿತತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago