ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು , ಇದೇ 30, 31 ರಂದು ಜಿಲ್ಲಾಧಿಕಾರಿ , ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ, ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2ಸಾವಿರದ 296 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಬಾಧಿತ ಸ್ಥಳಗಳೆಂದು ಗುರುತಿಸಲಾಗಿದೆ. ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1ಸಾವಿರದ 385 ಮನೆಗಳು ಭಾಗಶಃ ಹಾನಿಯಾಗಿದೆ ಎಂದು ತಿಳಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…