Advertisement
ಸುದ್ದಿಗಳು

ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ | ಉತ್ತರ ಭಾರತದ ಹಲವೆಡೆ ಭಾರಿ ಮಳೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ |

Share

ದೇಶದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಸೇರಿದಂತೆ ಉತ್ತರ ಭಾರತದ ಹಲವಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಲವು ಕಡೆ  ಎಲ್ಲೋ ಆಲರ್ಟ್ ಘೋಷಿಸಲಾಗಿದೆ.  ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ಛತ್ತೀಸ್ ಗಢ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿಯೂ ಇಂದು ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಮಾಹೆ, ಕೊಂಕಣ, ಗೋವಾ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನ  ಪ್ರತ್ಯೇಕ ಸ್ಥಳಗಳಲ್ಲಿ ಪ್ರಬಲ ಮೇಲ್ಮೈ ಗಾಳಿ ಬೀಸುವ ನಿರೀಕ್ಷೆಯಿದೆ.

ರಾಜ್ಯದಲ್ಲೂ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.  ಉತ್ತರಕನ್ನಡ ಜಿಲ್ಲೆ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ರಜೆ ಘೋಷಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕುಮಟಾದಲ್ಲಿ ಅತೀ ಹೆಚ್ಚು 191.8 ಮೀಲಿ ಮೀಟರ್ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ ಸೂಚನೆ ನೀಡಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

23 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago