ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿ | ಮುಖ್ಯಮಂತ್ರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ |

October 26, 2024
7:12 AM

ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56 ಸಾವಿರ  ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ. ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ. ಜಂಟಿ ಸಮೀಕ್ಷಾ ವರದಿಗಳ ಪರಿಶೀಲನೆಯ ನಂತರ 15 ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದರು.   ಚಿತ್ರದುರ್ಗ ಜಿಲ್ಲೆಯ ಬೆಳಘಟ್ಟ, ವಿಜಾಪುರ ಲಕ್ಷ್ಮೀಸಾಗರ, ಗೌರಮ್ಮನಹಳ್ಳಿ ಮತ್ತು ಸಾದರಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಸಚಿವರು, ಈರುಳ್ಳಿ, ಮೆಕ್ಕೆಜೋಳ, ಕಡಲೆಕಾಯಿ ಮತ್ತು ಇತರ ಮಳೆ ಆಶ್ರಿತ ಬೆಳೆಗಳ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ, ರೈತರೊಂದಿಗೆ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror