ಬುಧವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಸುಳ್ಯ ತಾಲೂಕು ಸೇರಿದಂತೆ ವಿವಿದೆಡೆಯ ಕೃಷಿಕರಿಗೆ ಅಪಾರ ನಷ್ಟವಾಗಿದೆ. ಗಾಳಿ ಮಳೆಗೆ ವಿವಿದೆಡೆ ಮನೆಗೆ, ಅಂಗಡಿಗಳಿಗೆ ಹಾನಿಯಾಗಿದೆ. ಪುತ್ತೂರು ಜಾತ್ರಾ ಉತ್ಸವದ ಪ್ರಯುಕ್ತ ಹಾಕಿದ್ದ ಅಂಗಡಿಗಳಿಗೂ ಮಳೆಯಿಂದ ಹಾನಿಯಾಗಿದೆ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸುಳ್ಯ ತಾಲೂಕಿನ ವಿವಿದೆಡೆ ಅಡಿಕೆ ಮರಗಳು ಉರುಳಿದೆ. ಕಳೆದ 3 ದಿನದ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಅಡಿಕೆ ಮರಗಳು ನಾಶವಾಗಿದೆ. ಬುಧವಾರ ಕಲ್ಲಾಜೆಯಲ್ಲಿ 95 ಮಿಮೀ ದಾಖಲೆಯ ಮಳೆಯಾಗಿದೆ. 1994 ರಲ್ಲಿ ಎಪ್ರಿಲ್ ತಿಂಗಳಲ್ಲಿ ದಾಖಲೆಯ ಮಳೆಯಾಗಿತ್ತು ಎಂದು ಮಳೆ ದಾಖಲೆ ಸಂಗ್ರಹಗಾರ ಪಿ ಜಿ ಎಸ್ ಎನ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನಲ್ಲಿ ಮಳೆಯ ಅಬ್ಬರ ಇದೆ. ಅದರಲ್ಲೂ ಗಾಳಿ ಮಳೆಗೆ ಅಪಾರ ಪ್ರಮಾಣದ ಕೃಷಿ ಹಾನಿಯಾಗುತ್ತಿದೆ. ಬುಧವಾರ ದ ಕ ಜಿಲ್ಲೆಯ ವಿವಿದೆಡೆ ಗಾಳಿಯ ಅಬ್ಬರವೂ ಕಂಡುಬಂದಿತ್ತು. ಸುಳ್ಯ ಸೇರಿದಂತೆ ಪುತ್ತೂರು, ಬೆಳ್ತಂಗಡಿಯ ವಿವಿಧ ಕೃಷಿಕರ ತೋಟದಲ್ಲಿ ಅಡಿಕೆ ಮರಗಳು ಧರೆಗೆ ಉರುಳಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಕೃಷಿಕ ಸುರೇಶ್ಚಂದ್ರ ಅವರ ತೋಟದಲ್ಲಿ ಕಳೆದ ಮೂರು ದಿನಗಳ ಗಾಳಿಗೆ ಒಟ್ಟು ಸುಮಾರು 200 ಕ್ಕೂ ಅಧಿಕ ಅಡಿಕೆ ಮರ ಧರೆಗೆ ಉರುಳಿದೆ. ಆಸುಪಾಸಿನ ಕೃಷಿಕರ ತೋಟದಲ್ಲೂ ಕೃಷಿ ನಾಶವಾಗಿದೆ. ಪಂಜ, ಕರಿಕಳದಲ್ಲೂ ಕೃಷಿ ನಾಶವಾಗಿದೆ. ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿಯ ಅಬ್ಬರದಿಂದ ಕೃಷಿಕರು ನಷ್ಟ ಅನುಭವಿಸಿದರು.
ಕಲ್ಲಾಜೆ 95 ಮಿಮೀ, ಕಮಿಲ 51 ಮಿಮೀ, ಮಡಪ್ಪಾಡಿ 47 ಮಿಮೀ,ಬಂಗಾರಡ್ಕ ಆರ್ಯಾಪು 47 ಮಿಮೀ, ಸುಬ್ರಹ್ಮಣ್ಯ 46 ಮಿಮೀ, ಬಳ್ಪ 43 ಮಿಮೀ, ದೊಡ್ಡತೋಟ 44 ಮಿಮೀ, ಕೇನ್ಯ 41ಮಿಮೀ, ನೆಲ್ಯಾಡಿ 39, ಕಂದ್ರಪ್ಪಾಡಿ 36 ಮಿಮೀ, ಕೈಲಾರು 36 ಮಿಮೀ, ಮಂಜಿ 35 ಮಿಮೀ, ಬೆಳ್ತಂಗಡಿ 35 ಮಿಮೀ, ಮುಂಡೂರು 35 ಮಿಮೀ, ನೆಕ್ರಕಜೆ 35 ಮಿಮೀ, ಬಲ್ನಾಡು 34 ಮಿಮೀ, ಮೆಟ್ಟಿನಡ್ಕ 34 ಮಿಮೀ, ಕೊಳ್ತಿಗೆ 34 ಮಿಮೀ, ಕೆಲಿಂಜ 30 ಮಿಮೀ, ಕೈರಂಗಳ 25 ಮಿಮೀ, ಉರುವಾಲು 28 ಮಿಮೀ, ಮರ್ಧಾಳ 26 ಮಿಮೀ, ಉಪ್ಪಿನಂಗಡಿ 26 ಮಿಮೀ, ಹರಿಹರ 25 ಮಿಮೀ, ಕೋಡಿಂಬಾಳ 24 ಮಿಮೀ, ಪಾಂಡೇಶ್ವರ 22 ಮಿಮೀ, ಕೊಲ್ಲಮೊಗ್ರ 22 ಮಿಮೀ, ಚೊಕ್ಕಾಡಿ 20 ಮಿಮೀ, ಮುರುಳ್ಯ 19 ಮಿಮೀ, ಎಣ್ಮೂರು 18 ಮಿಮೀ , ಬೆಳ್ಳಾರೆ ಕಾವಿನಮೂಲೆ 18 ಮಿಮೀ, ಕಡಬ 18 ಮಿಮೀ, ಕರಿಕಳ 18 ಮಿಮೀ, , ಅಯ್ಯನಕಟ್ಟೆ 16 ಮಿಮೀ, ಬಾಳಿಲ 16 ಮಿಮೀ, ಸುಳ್ಯ 16 ಮಿಮೀ ಮಳೆಯಾಗಿದೆ. ಕಾಸರಗೋಡಿನಲ್ಲಿ ದಾಖಲೆಯ ಮಳೆಯಾಗಿದೆ. ರಾತ್ರಿ ಇಡೀ ವರ್ಷಧಾರೆಯಾಗಿದ್ದು ಕಳೆದ 24 ಗಂಟೆಯಲ್ಲಿ 138 ಮಿಮೀ ಮಳೆಯಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…