Advertisement
The Rural Mirror ವಾರದ ವಿಶೇಷ

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

Share

 ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಚಾಮರಾಜನಗರ ಜಿಲ್ಲೆಯ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ ಕಾನನ ಹೊಸ ಚಿಗುರಿನಿಂದ ಸಿಂಗಾರಗೊಂಡಂತಿದೆ, ಉಕ್ಕಿ ಹರಿಯುತ್ತಿರುವ ನದಿ-ತೊರೆಗಳು ಪರಿಸರದಲ್ಲಿ ಜೀವಂತಿಕೆ ವಾತಾವರಣ ಸೃಷ್ಠಿಸಿವೆ. ಪ್ರವಾಸಿಗರಿಗೆ ಹಸಿರುವ ಸ್ವರ್ಗ ಕಾಣುವಂತಾಗಿದೆ.…..ಮುಂದೆ ಓದಿ….

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ  ಚಾಮರಾಜನಗರ ಜಿಲ್ಲೆಯ ವನ್ಯ ಜೀವಿಧಾಮಗಳಲ್ಲಿ  ಹಚ್ಚ ಹಸಿರಿನ ವಾತಾವರಣ ನಿರ್ಮಾಣವಾಗಿದ್ದು,  ಮಲೆ ಮಹದೇಶ್ವರ ವನ್ಯ ಜೀವಿಧಾಮ, ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ, ಬಂಡೀಪುರ ಮತ್ತು ಕಾವೇರಿ ವನ್ಯ ಜೀವಿಧಾಮ ಸೇರಿದಂತೆ ವಿವಿಧೆಡೆ ಹಸಿರ ಹಬ್ಬದ ಸಂಭ್ರಮ ಮನೆ ಮಾಡಿದೆ, ಎಲ್ಲಿ ನೋಡಿದರು ಹಚ್ಚ ಹಸಿರಿನ ರಂಗು ತುಂಬಿದ್ದು,  ಬನವೆಲ್ಲ ನೋಡುಗರ ಮನಗಳಿಗೆ ಮುದ ನೀಡುತ್ತಿವೆ. ಮರದ ಎಲೆಗಳ ತುಂಬೆಲ್ಲ ತುಂತುರು ಹನಿಗಳೆ ತುಂಬಿರಲು, ಆನೆಗಳು, ಜಿಂಕೆ – ಸಾರಂಗಳು, ಮರ ಹತ್ತಿ ನಲಿಯುತ್ತಿರುವ ಕೋತಿಗಳು, ಬನದ ಸಿರಿಗೆ ಕುಣಿದಾಡುತ್ತಿರುವ ನವಿಲುಗಳು ಹಸಿರ ಬನದ ತುಂಬೆಲ್ಲಾ  ಕಲರವ ಉಂಟು ಮಾಡಿವೆ, ಮೇವನ್ನರಸಿ ನಾಡಿಗೆ ಬಂದಿದ್ದ ಪ್ರಾಣಿ –ಪಕ್ಷಿಗಳೆಲ್ಲ ಕಾಡಿಗೆ ಸಂಭ್ರಮದಿಂದ ಹಿಂತಿರುತ್ತಿವೆ, ತುಂತುರು ಮಳೆಗೆ ತಂಪಾದ ಭೂಮಿ, ಮಂಜುವಿನಿಂದ ಮಸುಕಾದ ಬಾನು, ಬೆಟ್ಟಕ್ಕೆ ತಾಗಿದ ಮೋಡ ಮೈನವಿರೇಳಿಸುವಂತಿದ್ದು,  ಪ್ರವಾಸಿಗರನ್ನು  ಕೈಬೀಸಿ ಕರೆಯುತ್ತಿವೆ. ಬಿಳಿಗಿರಿ ರಂಗಸ್ವಾಮಿ ದೇವಾಲಯ ಹಾಗೂ ಗೋಪಾಲಸ್ವಾಮಿ ದೇವಾಲಯಗಳು ಮಂಜಿನಿಂದ ವ್ಯಾಪಿಸಿದ್ದು, ಪ್ರವಾಸಿಗರು ಈ ಸೊಬಗನ್ನು ಕಂಡು ಕಣ್ತುಂಬಿಕೊಳ್ಳುತ್ತಿರುವುದು ವಿಶೇಷವಾಗಿದೆ.

Advertisement

ಪ್ರತಿ ವರ್ಷವು ಬಂಡೀಪುರ ಹುಲಿ  ಸಂರಕ್ಷಿತ ಪ್ರದೇಶಕ್ಕೆ ಬರುತ್ತಿದ್ದೆವು, ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಎಲ್ಲೆಡೆ ಹಚ್ಚ ಹಸಿರಿನ ವಾತಾವರಣ ನಿರ್ಮಾಣವಾಗಿದ್ದು, ಮನಸ್ಸಿಗೆ ಮುದ ನೀಡಿದೆ ಎಂದು ಪ್ರವಾಸಿಗರಾದ ಗೀತಾ ಶ್ರೀನಾಥ್ ಸಂತಸ ವ್ಯಕ್ತ ಪಡಿಸಿದರು.

ಮಳೆಯ ನಡುವೆ ಹಸಿರಿನ ಗಿರಿ ಬನಗಳನ್ನು ಕಾಣುವುದೇ ಕಣ್ಣಿಗೆ ಹಬ್ಬವಾಗಿದ್ದು,  ವನ್ಯ ಜೀವಿಧಾಮಗಳೆಲ್ಲ ಜೀವ ಬಂದಂತೆ ಕಂಗೊಳಿಸುತ್ತಿವೆ, ಮಳೆಯಿಂದಾಗಿ ಜಿಲ್ಲೆಯ ಕಾಡಿನ ತುಂಬೆಲ್ಲಾ ಹಸಿರ ಹಬ್ಬದ ಸಡಗರ ಮನೆ ಮಾಡಿದೆ, ಸಫಾರಿ ಮಾಡುವ ಪ್ರವಾಸಿರಿಗೆ ಮೈನವಿರೇಳಿಸುವ ಅನುಭವವನ್ನು ಅರಣ್ಯ ಪ್ರದೇಶಗಳು ನೀಡುತ್ತಿವೆ ಎಂದು  ಪ್ರವಾಸಿಗರಾದ ತ್ರಿಪುರಾಂತಕ ಹಾಗೂ ರುದ್ರೇಶ್ ಅಭಿಪ್ರಾಯಪಟ್ಟರು. …..ಮುಂದೆ ಓದಿ….

Advertisement

ಇತ್ತೀಚಿಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕಾಡೆಲ್ಲ ಹಚ್ಚ ಹಸಿರಿನಿಂದ ಕೂಡಿದೆ, ವನ್ಯ ಜೀವಿಗಳಿಗೆ ಬೇಕಾದಂತಹ ಆಹಾರ ಲಭಿಸಿದ್ದು, ಕೆರೆ-ತೊರೆಗಳೆಲ್ಲ ತುಂಬಿ ಹರಿಯುತ್ತಿವೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ವನ್ಯಜೀವಿಧಾಮಗಳಿಗೆ ಭೇಟಿ ನೀಡಿ, ಪ್ರಕೃತಿ ಸೊಬಗನ್ನು ಅನುಭವಿಸುತ್ತಿದ್ದಾರೆ ಎಂದು ಹುಲಿ ಸಂರಕ್ಷಿತ ಪ್ರದೇಶದ ಹುಲಿ ಯೋಜನೆಯ ನಿರ್ದೇಶಕ ಶ್ರೀಪತಿ ತಿಳಿಸಿದರು.

ಒಟ್ಟಾರೆಯಾಗಿ ಪ್ರಕೃತಿ ಸೊಬಗಿನಿಂದ ಕಂಗೊಳಿಸುತ್ತಿರುವ ವನ್ಯ ಜೀವಿಧಾಮಗಳು ನಗರ ಜೀವನದಿಂದ ಬೇಸತ್ತ ಮನಗಳಿಗೆ ಕಿಂಚಿತ್ತು ನೆಮ್ಮದಿ ನೀಡಿ, ಪ್ರಕೃತಿಯ ಮಡಿಲಲ್ಲಿ ಒಂದಷ್ಟು ಆನಂದದ ಕ್ಷಣಗಳನ್ನು ಕಳೆಯಲು ಅನುವು ಮಾಡಿಕೊಡುತ್ತಿರುವುದು ಸಂತಸದ ವಿಚಾರವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

14 minutes ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

2 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

3 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

3 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

4 hours ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…

20 hours ago