MIRROR FOCUS

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮಳೆ, ಪ್ರವಾಹ, ಭೂಕುಸಿತ | ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ | ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ ಏನು?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಗೊಂಡಿದ್ದು, ವರುಣ(Rain) ಅಬ್ಬರಿಸುತ್ತಿದ್ದಾನೆ. ಹಲವು ಕಡೆ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಕಾರವಾರದ ಗೋವಾ-ಮಂಗಳೂರು(Goa-Mangaluru) ಹೆದ್ದಾರಿಯಲ್ಲಿ ಮತ್ತೆ ಕಲ್ಲುಬಂಡೆ ಕುಸಿದಿದೆ. ಹೊನ್ನಾವರದ ಕರ್ನಲ್ ಹಿಲ್ ಬಳಿ ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ಇಡೂರಿನಲ್ಲಿ ಗುಡ್ಡದ ನೀರು ಹರಿದು ಹೆದ್ದಾರಿ ಹಾಗೂ ಮನೆಗಳು ಜಲಾವೃತವಾಗಿದೆ. ಅರೆಬೈಲ್‌ನಲ್ಲಿ ಹೈವೇ ಮೇಲೆ ಮರ ಬಿದ್ದಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಕಾರಣ ನದಿಗಳೆಲ್ಲಾ ತುಂಬಿ ಹರಿದು, ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ (Dakshina Kannada) ಮಳೆಯ (Rain) ಅಬ್ಬರ ಮುಂದುವರಿದಿದ್ದು,  ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ. ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ

ಕೊಡಗಿನಲ್ಲಿಯೂ ಮಳೆಯಾಗುತ್ತಿದ್ದು, ಚಿಕ್ಲಿಹೊಳೆ ಡ್ಯಾಂ ತುಂಬಿ ಹರಿದಿದೆ. ಶಿರಾಡಿಘಾಟ್‌ನ ಹಲವೆಡೆ ನಿರ್ಮಾಣದ ಹಂತದ ರಸ್ತೆ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಅಫಜಲಪುರ ಬಳಿ ಸೇತುವೆ ಜಲಾವೃತವಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಕಾರಣ ಚಿಕ್ಕೋಡಿಯ ನಾಲ್ಕು ಸೇತುವೆ ಮುಳುಗಡೆಯಾಗಿವೆ. ಖಾನಾಪುರದ ಏಳು ಫಾಲ್ಸ್ ನೋಡಲು ಅವಕಾಶ ನೀಡದಿರುವುದಕ್ಕೆ ಪ್ರವಾಸಿಗರಿಂದ ಆಕ್ರೋಶ ವ್ಯಕ್ತವಾಗಿವೆ. ಗೋಕಾಕ್ ಫಾಲ್ಸ್ ಬಳಿ ಸೂಕ್ತ ಭದ್ರತೆ ಕೈಗೊಳ್ಳದ ಕಾರಣ ಪ್ರವಾಸಿಗರು ಬಂಡೆಗಲ್ಲುಗಳ ಅಂಚಿನಲ್ಲಿ ಸೆಲ್ಫಿ ಹುಚ್ಚಾಟ ನಡೆಸಿದ್ದಾರೆ.

ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ
ಕೆಎಆರ್‌ಎಸ್ ಜಲಾಶಯದ ಒಟ್ಟು ಸಾಮರ್ಥ್ಯ 49.45 ಟಿಎಂಸಿ, ಇಂದಿನ ಮಟ್ಟ 24.42 ಟಿಎಂಸಿ ಇದ್ದು, ಒಳಹರಿವು 11,027 ಕ್ಯೂಸೆಕ್ ಹಾಗೂ ಹೊರಹರಿವು 562 ಕ್ಯೂಸೆಕ್ ಇದೆ. ಕಬಿನಿ ಒಟ್ಟು ಸಾಮರ್ಥ್ಯ 19.52 ಟಿಎಂಸಿ, ಇಂದಿನ ಮಟ್ಟ 17.98 ಟಿಎಂಸಿ ಇದೆ. ಒಳಹರಿವು 5,039 ಕ್ಯೂಸೆಕ್ ಹಾಗೂ ಹೊರಹರಿವು 3250 ಕ್ಯೂಸೆಕ್ ಇದೆ.

ಹೇಮಾವತಿ ಒಟ್ಟು ಸಾಮರ್ಥ್ಯ 37.10 ಟಿಎಂಸಿ, ಇಂದಿನ ಮಟ್ಟ 17.60 ಟಿಎಂಸಿ ಇದೆ. ಒಳಹರಿವು 7,796 ಕ್ಯೂಸೆಕ್ ಹಾಗೂ ಒಳಹರಿವು 250 ಕ್ಯೂಸೆಕ್ ಇದೆ. ಹಾರಂಗಿ ಒಟ್ಟು ಸಾಮರ್ಥ್ಯ 8.50 ಟಿಎಂಸಿ, ಇಂದಿನ ಮಟ್ಟ 5.46 ಟಿಎಂಸಿ ಇದೆ. ಒಳಹರಿವು 2,472 ಕ್ಯೂಸೆಕ್ ಹಾಗೂ ಒಳಹರಿವು 200 ಕ್ಯೂಸೆಕ್ ಇದೆ. ತುಂಗಭದ್ರಾ ಒಟ್ಟು ಸಾಮರ್ಥ್ಯ 105.79 ಟಿಎಂಸಿ, ಇಂದಿನ ಮಟ್ಟ 18.24 ಟಿಎಂಸಿ ಇದೆ. ಒಳಹರಿವು 50,715 ಕ್ಯೂಸೆಕ್ ಹಾಗೂ ಹೊರಹರಿವು 391 ಕ್ಯೂಸೆಕ್ ಇದೆ. ಲಿಂಗನಮಕ್ಕಿ ಜಲಾಶಯದ ಒಟ್ಟು ಸಾಮರ್ಥ್ಯ 151.75 ಟಿಎಂಸಿ, ಇಂದಿನ ಮಟ್ಟ 35.41 ಟಿಎಂಸಿ ಇದೆ. ಒಳಹರಿವು 29,044 ಕ್ಯೂಸೆಕ್ ಹಾಗೂ ಹೊರಹರಿವು 1570 ಕ್ಯೂಸೆಕ್ ಇದೆ. ಸೂಪಾ ಜಲಾಶಯದ ಒಟ್ಟು ಸಾಮರ್ಥ್ಯ 145.33 ಟಿಎಂಸಿ, ಇಂದಿನ ಮಟ್ಟ 42.81 ಟಿಎಂಸಿ ಇದೆ. ಒಳಹರಿವು 28,597 ಕ್ಯೂಸೆಕ್ ಹಾಗೂ ಹೊರಹರಿವು 500 ಕ್ಯೂಸೆಕ್ ಇದೆ. ಆಲಮಟ್ಟಿ ಡ್ಯಾಂನ ಒಟ್ಟು ಸಾಮರ್ಥ್ಯ 123.08 ಟಿಎಂಸಿ, ಇಂದಿನ ಮಟ್ಟ 59.39 ಟಿಎಂಸಿ ಇದೆ. ಒಳಹರಿವು 59,306 ಕ್ಯೂಸೆಕ್ ಹಾಗೂ ಹೊರಹರಿವು 430 ಕ್ಯೂಸೆಕ್ ಇದೆ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

4 minutes ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

3 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

3 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

3 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…

3 hours ago