ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಗೊಂಡಿದ್ದು, ವರುಣ(Rain) ಅಬ್ಬರಿಸುತ್ತಿದ್ದಾನೆ. ಹಲವು ಕಡೆ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಕಾರವಾರದ ಗೋವಾ-ಮಂಗಳೂರು(Goa-Mangaluru) ಹೆದ್ದಾರಿಯಲ್ಲಿ ಮತ್ತೆ ಕಲ್ಲುಬಂಡೆ ಕುಸಿದಿದೆ. ಹೊನ್ನಾವರದ ಕರ್ನಲ್ ಹಿಲ್ ಬಳಿ ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದೆ. ಇಡೂರಿನಲ್ಲಿ ಗುಡ್ಡದ ನೀರು ಹರಿದು ಹೆದ್ದಾರಿ ಹಾಗೂ ಮನೆಗಳು ಜಲಾವೃತವಾಗಿದೆ. ಅರೆಬೈಲ್ನಲ್ಲಿ ಹೈವೇ ಮೇಲೆ ಮರ ಬಿದ್ದಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಕಾರಣ ನದಿಗಳೆಲ್ಲಾ ತುಂಬಿ ಹರಿದು, ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ (Dakshina Kannada) ಮಳೆಯ (Rain) ಅಬ್ಬರ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ. ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ
ಕೊಡಗಿನಲ್ಲಿಯೂ ಮಳೆಯಾಗುತ್ತಿದ್ದು, ಚಿಕ್ಲಿಹೊಳೆ ಡ್ಯಾಂ ತುಂಬಿ ಹರಿದಿದೆ. ಶಿರಾಡಿಘಾಟ್ನ ಹಲವೆಡೆ ನಿರ್ಮಾಣದ ಹಂತದ ರಸ್ತೆ ಕುಸಿಯುತ್ತಿರುವುದು ಆತಂಕ ಮೂಡಿಸಿದೆ. ಅಫಜಲಪುರ ಬಳಿ ಸೇತುವೆ ಜಲಾವೃತವಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆ ಕಾರಣ ಚಿಕ್ಕೋಡಿಯ ನಾಲ್ಕು ಸೇತುವೆ ಮುಳುಗಡೆಯಾಗಿವೆ. ಖಾನಾಪುರದ ಏಳು ಫಾಲ್ಸ್ ನೋಡಲು ಅವಕಾಶ ನೀಡದಿರುವುದಕ್ಕೆ ಪ್ರವಾಸಿಗರಿಂದ ಆಕ್ರೋಶ ವ್ಯಕ್ತವಾಗಿವೆ. ಗೋಕಾಕ್ ಫಾಲ್ಸ್ ಬಳಿ ಸೂಕ್ತ ಭದ್ರತೆ ಕೈಗೊಳ್ಳದ ಕಾರಣ ಪ್ರವಾಸಿಗರು ಬಂಡೆಗಲ್ಲುಗಳ ಅಂಚಿನಲ್ಲಿ ಸೆಲ್ಫಿ ಹುಚ್ಚಾಟ ನಡೆಸಿದ್ದಾರೆ.
ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ
ಕೆಎಆರ್ಎಸ್ ಜಲಾಶಯದ ಒಟ್ಟು ಸಾಮರ್ಥ್ಯ 49.45 ಟಿಎಂಸಿ, ಇಂದಿನ ಮಟ್ಟ 24.42 ಟಿಎಂಸಿ ಇದ್ದು, ಒಳಹರಿವು 11,027 ಕ್ಯೂಸೆಕ್ ಹಾಗೂ ಹೊರಹರಿವು 562 ಕ್ಯೂಸೆಕ್ ಇದೆ. ಕಬಿನಿ ಒಟ್ಟು ಸಾಮರ್ಥ್ಯ 19.52 ಟಿಎಂಸಿ, ಇಂದಿನ ಮಟ್ಟ 17.98 ಟಿಎಂಸಿ ಇದೆ. ಒಳಹರಿವು 5,039 ಕ್ಯೂಸೆಕ್ ಹಾಗೂ ಹೊರಹರಿವು 3250 ಕ್ಯೂಸೆಕ್ ಇದೆ.
ಹೇಮಾವತಿ ಒಟ್ಟು ಸಾಮರ್ಥ್ಯ 37.10 ಟಿಎಂಸಿ, ಇಂದಿನ ಮಟ್ಟ 17.60 ಟಿಎಂಸಿ ಇದೆ. ಒಳಹರಿವು 7,796 ಕ್ಯೂಸೆಕ್ ಹಾಗೂ ಒಳಹರಿವು 250 ಕ್ಯೂಸೆಕ್ ಇದೆ. ಹಾರಂಗಿ ಒಟ್ಟು ಸಾಮರ್ಥ್ಯ 8.50 ಟಿಎಂಸಿ, ಇಂದಿನ ಮಟ್ಟ 5.46 ಟಿಎಂಸಿ ಇದೆ. ಒಳಹರಿವು 2,472 ಕ್ಯೂಸೆಕ್ ಹಾಗೂ ಒಳಹರಿವು 200 ಕ್ಯೂಸೆಕ್ ಇದೆ. ತುಂಗಭದ್ರಾ ಒಟ್ಟು ಸಾಮರ್ಥ್ಯ 105.79 ಟಿಎಂಸಿ, ಇಂದಿನ ಮಟ್ಟ 18.24 ಟಿಎಂಸಿ ಇದೆ. ಒಳಹರಿವು 50,715 ಕ್ಯೂಸೆಕ್ ಹಾಗೂ ಹೊರಹರಿವು 391 ಕ್ಯೂಸೆಕ್ ಇದೆ. ಲಿಂಗನಮಕ್ಕಿ ಜಲಾಶಯದ ಒಟ್ಟು ಸಾಮರ್ಥ್ಯ 151.75 ಟಿಎಂಸಿ, ಇಂದಿನ ಮಟ್ಟ 35.41 ಟಿಎಂಸಿ ಇದೆ. ಒಳಹರಿವು 29,044 ಕ್ಯೂಸೆಕ್ ಹಾಗೂ ಹೊರಹರಿವು 1570 ಕ್ಯೂಸೆಕ್ ಇದೆ. ಸೂಪಾ ಜಲಾಶಯದ ಒಟ್ಟು ಸಾಮರ್ಥ್ಯ 145.33 ಟಿಎಂಸಿ, ಇಂದಿನ ಮಟ್ಟ 42.81 ಟಿಎಂಸಿ ಇದೆ. ಒಳಹರಿವು 28,597 ಕ್ಯೂಸೆಕ್ ಹಾಗೂ ಹೊರಹರಿವು 500 ಕ್ಯೂಸೆಕ್ ಇದೆ. ಆಲಮಟ್ಟಿ ಡ್ಯಾಂನ ಒಟ್ಟು ಸಾಮರ್ಥ್ಯ 123.08 ಟಿಎಂಸಿ, ಇಂದಿನ ಮಟ್ಟ 59.39 ಟಿಎಂಸಿ ಇದೆ. ಒಳಹರಿವು 59,306 ಕ್ಯೂಸೆಕ್ ಹಾಗೂ ಹೊರಹರಿವು 430 ಕ್ಯೂಸೆಕ್ ಇದೆ.
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…