ಬಿಸಿಲಿನ ಧಗೆ ಹೆಚ್ಚಾಗುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲೆಯಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮೊದಲ ಮಳೆಗೆ ಜನತೆ ಖುಷಿಪಟ್ಟರು. ಕೃಷಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.….ಮುಂದೆ ಓದಿ…..
ಈ ಬಾರಿ ಮಳೆಯ ಕೊರತೆಯಿಂದ ರಾಜ್ಯದ ಎಲ್ಲೆಡೆ ಕೃಷಿಕರು ಕಂಗಾಲಾಗಿದ್ದಾರೆ. ಬಿಸಿಲ ಧಗೆಯಿಂದ ಭೂಮಿ ಕಾದ ಕಾವಲಿಯಂತಾಗಿತ್ತು. ನೀರಿಲ್ಲದೆ ತೋಟಗಳು ಸಂಪೂರ್ಣ ಒಣಗಿ ನಿಂತಿದ್ದವು. ಈ ವರ್ಷ ಬಯಲು ಸೀಮೆ ಭಾಗವಾದ ಕಡೂರು, ತರೀಕೆರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಈ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆಯಾಗಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.….ಮುಂದೆ ಓದಿ…..
ಇದೇ ವೇಳೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…