ಬಿಸಿಲಿನ ಧಗೆ ಹೆಚ್ಚಾಗುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲೆಯಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮೊದಲ ಮಳೆಗೆ ಜನತೆ ಖುಷಿಪಟ್ಟರು. ಕೃಷಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.….ಮುಂದೆ ಓದಿ…..
ಈ ಬಾರಿ ಮಳೆಯ ಕೊರತೆಯಿಂದ ರಾಜ್ಯದ ಎಲ್ಲೆಡೆ ಕೃಷಿಕರು ಕಂಗಾಲಾಗಿದ್ದಾರೆ. ಬಿಸಿಲ ಧಗೆಯಿಂದ ಭೂಮಿ ಕಾದ ಕಾವಲಿಯಂತಾಗಿತ್ತು. ನೀರಿಲ್ಲದೆ ತೋಟಗಳು ಸಂಪೂರ್ಣ ಒಣಗಿ ನಿಂತಿದ್ದವು. ಈ ವರ್ಷ ಬಯಲು ಸೀಮೆ ಭಾಗವಾದ ಕಡೂರು, ತರೀಕೆರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಈ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆಯಾಗಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.….ಮುಂದೆ ಓದಿ…..
ಇದೇ ವೇಳೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…