ಬಿಸಿಲಿನ ಧಗೆ ಹೆಚ್ಚಾಗುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಬೀದರ್ ಹಾಗೂ ಚಿಕ್ಕಮಗಳೂರು ಜಿಲ್ಲೆಯಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮೊದಲ ಮಳೆಗೆ ಜನತೆ ಖುಷಿಪಟ್ಟರು. ಕೃಷಿಕರು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.….ಮುಂದೆ ಓದಿ…..
ಈ ಬಾರಿ ಮಳೆಯ ಕೊರತೆಯಿಂದ ರಾಜ್ಯದ ಎಲ್ಲೆಡೆ ಕೃಷಿಕರು ಕಂಗಾಲಾಗಿದ್ದಾರೆ. ಬಿಸಿಲ ಧಗೆಯಿಂದ ಭೂಮಿ ಕಾದ ಕಾವಲಿಯಂತಾಗಿತ್ತು. ನೀರಿಲ್ಲದೆ ತೋಟಗಳು ಸಂಪೂರ್ಣ ಒಣಗಿ ನಿಂತಿದ್ದವು. ಈ ವರ್ಷ ಬಯಲು ಸೀಮೆ ಭಾಗವಾದ ಕಡೂರು, ತರೀಕೆರೆ ತಾಲೂಕಿನಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಈ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ ಐದಳ್ಳಿ, ಕಣತಿ, ಮಾಗೋಡು, ಹುಣಸೇಹಳ್ಳಿ, ಕಡಬಗೆರೆ ಸುತ್ತಮುತ್ತ ಮಳೆಯಾಗಿದೆ. ಕಳೆದ ಐದು ದಿನದ ಹಿಂದೆ ಮಲೆನಾಡಿನಲ್ಲಿ ಮೊದಲ ಮಳೆಯಾಗಿತ್ತು.….ಮುಂದೆ ಓದಿ…..
ಇದೇ ವೇಳೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…