ಅ.3 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ

September 27, 2025
8:45 PM

ಉತ್ತರನಾಡು ಹಾಗೂ ಕರಾವಳಿಯ ಹಲವೆಡೆ ವ್ಯಾಪಕ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ ಮೂರರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಕೆಲವೆಡೆ ಹಗುರವಾಗಿ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಶೇಕಡ 223 ರಷ್ಟು ಹೆಚ್ಚಿನ ಮಳೆ ಬಿದ್ದಿರುವ ಕಾರಣ ನಾಳೆವರೆಗೂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ. ಮುಂದಿನ 48 ಗಂಟೆಗಳ ಕಾಲ ಭೀಮಾ ನದಿಯಲ್ಲಿ ಒಳ ಹರಿವಿನಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಕಂಡು ಬರುವ ಸಾಧ್ಯತೆ ಇರಲಿದೆ. ಭೀಮಾನದಿ, ಸನ್ನತಿ ಹಾಗೂ ಯಾದಗಿರಿ ಬ್ರಿಡ್ಜ್ ಕಂ ಬ್ಯಾರೇಜ್ ನ ಒಳ ಹರಿವು 4 ಲಕ್ಷದ 20 ಸಾವಿರ ಕ್ಯೂಸೆಕ್ಸ್ ಹಾಗೂ ಹೊರ ಹರಿವು 4 ಲಕ್ಷದ 20 ಸಾವಿರ ಕ್ಯೂಸೆಕ್ ನೀರು ಹರಿಯತ್ತಿದೆ. ನಿನ್ನೆ ರಾತ್ರಿ ಶಹಾಪುರ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ 5 ಮನೆಗಳಿಗೆ ನೀರು ನುಗ್ಗಿದ್ದು, 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಭೀಮಾ ನದಿ ನೀರಿನ ಪ್ರವಾಹದಿಂದ ರೋಜಾ, ಎಸ್ ಶಿರವಾಳದಿದ ಹೊಸುರ ಗ್ರಾಮದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಜೋಳದಡಗಿ ಸೇತುವೆ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಸತತ ಮಳೆಯಿಂದ ಹಾಗೂ ನದಿ ನೀರು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳು ಹಾನಿಯಾಗಿದ್ದು, ಸುಮಾರು 1 ಲಕ್ಷದ 14 ಸಾವಿರದ ಮುನ್ನೂರು ಹೆಕ್ಟರ್‌ನಷ್ಟು ಬೆಳೆಹಾನಿಯಾಗಿರುವುದಾಗಿ ಅಂದಾಜಿಸಲಾಗಿದ್ದು, ಜಮೀನುಗಳ ಜಂಟಿ ಸಮೀಕ್ಷೆ ಕಾರ್ಯ ಪುಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror