ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ 27 ರವರೆಗೆ ಕರಾವಳಿ ಹಾಗೂ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ ಮುಂದುವರೆದಿದೆ. ಬೆಳಗ್ಗಿನಂದಲೇ ಸುರಿಯುತ್ತಿರುವ ಮಳೆಯಿಂದ ಅನೇಕ ಕಡೆ ಮರಗಳು ಉರುಳಿಬಿದ್ದಿವೆ. ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಉತ್ತಮ ಮಳೆ ಬೀಳುತ್ತಿದ್ದರೂ ಹೋಲಿಕೆಯಲ್ಲಿ ಕಳೆದ ವರ್ಷಕ್ಕಿಂತ ಕಡಮೆ ಮಳೆಯಾಗಿದೆ. ಜನವರಿಯಿಂದ ಈವರೆಗೆ ಕೊಡಗಿನಲ್ಲಿ ಕಳೆದ ವಷ 250 ಮಿಲಿ ಮೀಟರ್ ಮಳೆ ಬಿದ್ದಿದ್ದರೆ, ಈ ವರ್ಷ 216 ಮಿಲಿಮೀಟರ್ ಮಳೆಯಾಗಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಸೋಮವಾರಪೇಟೆ ತಾಲೂಕಿನಲ್ಲಿ ಕಡಮೆ ಮಳೆಯಾಗಿದೆ. ಮುಂದಿನ ವಾರ ಕೇರಳದ ಮೂಲಕ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದ್ದು, ಈ ವರ್ಷ ಮುಂಗಾರು ಪೂರ್ವ ಮಳೆಯು ಮೇ ತಿಂಗಳಿನಲ್ಲಿಯೇ ಪ್ರಾರಂಭವಾಗಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…