ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕೆಲವು ತಾಲೂಕುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್, ಮುಕ್ಕ, ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರುವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಳ್ಳಾಲ ಮತ್ತು ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಡಲು ಕೂಡ ಪ್ರಕ್ಷುಬ್ಧ ಗೊಂಡಿದ್ದು, ಉಳ್ಳಾಲ ಸಮುದ್ರದ ಭೋರ್ಗರೆತ ಹೆಚ್ಚಾಗಿದೆ.
ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಟ್ಕಳದಲ್ಲಿ ಅತೀ ಹೆಚ್ಚು 119 ಮಿಲಿ ಮೀಟರ್ ಮಳೆ ಸುರಿದಿದೆ ಹವಾಮಾನ ಇಲಾಖೆ ನಾಳೆಯವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…