Advertisement
ವೆದರ್ ಮಿರರ್

ಹವಾಮಾನ ವರದಿ | 27-09-2025 | ಅ.4 ರ ತನಕ ಕೆಲವು ಕಡೆ ಮಳೆ ಸಾಧ್ಯತೆ

Share

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ದೀರ್ಘ ಅವಧಿಯ ಮಳೆ ಸ್ವಲ್ಪ ಹೆಚ್ಚಿರಬಹುದು.  ಈಗಿನಂತೆ ಸೆಪ್ಟೆಂಬರ್ 29 ರಿಂದ ಮಳೆಯ ತೀವ್ರತೆ ಕಡಿಮೆಯಾಗಬಹುದು. ಅಕ್ಟೊಬರ್ 4 ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಸೆಪ್ಟೆಂಬರ್ 28ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. ಆದರೆ ಅಕ್ಟೊಬರ್ 4 ರಿಂದ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 29 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಅಕ್ಟೊಬರ್ 2 ಅಥವಾ 3 ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಭೂ ಪ್ರವೇಶಿಸಿದ್ದು, ಒಡಿಶಾ, ಆಂದ್ರಾ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಮೂಲಕ ತಿರುಗುತ್ತಿದೆ. ಸೆಪ್ಟೆಂಬರ್ 28 ರಂದು ಮಹಾರಾಷ್ಟ್ರದ ಮುಂಬೈ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಸೇರುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

3 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

10 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

12 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

12 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago