ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ ಸಾಧ್ಯತೆ : ಬಿಸಿಲ ಬೇಗೆಗೆ ವರುಣ ತಂಪೆರೆಯುವ ಸಾಧ್ಯತೆ

March 31, 2023
4:12 PM

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಮುಂದಿನ ಮೂರು ದಿನ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕೆಲವೆಡೆ ಮಳೆ: ಗುರುವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರು 3 ಸೆಂ.ಮೀ., ಚಾಮರಾಜನಗರದ ಬಂಡೀಪುರ, ರಾಮನಗರದ ಚನ್ನಪಟ್ಟಣ ತಲಾ 2 ಸೆಂ.ಮೀ., ಚಾಮರಾಜನಗರ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 39.7 ಡಿ.ಸೆ. ತಾಪಮಾನ ದಾಖಲಾಗಿದೆ. ರಾಯಚೂರು 39, ಗದಗ 37.4, ಬಳ್ಳಾರಿ 38.3, ದಾವಣಗೆರೆ 36, ಬಿದರ್‌ 36, ವಿಜಯಪುರ 36.6, ಶಿವಮೊಗ್ಗ 36, ಮೈಸೂರು 35, ಬೆಂಗಳೂರು 34, ಮಂಡ್ಯ 35.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror