Advertisement
ವೆದರ್ ಮಿರರ್

ಹವಾಮಾನ ವರದಿ | 19-10-2025 | ಗುಡುಗು ಮಳೆ | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ – ಉತ್ತಮ ಮಳೆ ಸಾಧ್ಯತೆ |

Share

20.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಅಕ್ಟೊಬರ್ 22ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನ ಲೆಕ್ಕಾಚಾರದಂತೆ ಅಕ್ಟೊಬರ್ 25 ಅಥವಾ 26 ರಂದು ಈ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡು, ತಮಿಳುನಾಡು ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago