ಹವಾಮಾನ ವರದಿ | 11-09-2025 | ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಎಲ್ಲಿ..?

September 11, 2025
1:52 PM
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ.

12.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಸೆಪ್ಟೆಂಬರ್ 13 ರಿಂದ 19 ರ ತನಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಈಗಿನಂತೆ ಸೆಪ್ಟೆಂಬರ್ 14 ರಿಂದ 18ರ ತನಕ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ನಂತರ ದಿನದ ಹೆಚ್ಚಿನ ಅವಧಿ ಬಿಸಿಲು ಇರಬಹುದು ಕೊಡಗು ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ಮುಂಜಾನೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 20 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನಗಳಲ್ಲಿ ಕಡಿಮೆ ಇರಬಹುದು. ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 13ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದ ಉತ್ತರ ಒಳನಾಡು, ಮಹಾರಾಷ್ಟ್ರ ಮೂಲಕ ಸಾಗಿ ಸೆಪ್ಟೆಂಬರ್ 15ರಂದು ಮಹಾರಾಷ್ಟ್ರ ಕರಾವಳಿ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror